ರಾಜ್ಯ

ಬಿಜೆಪಿಗೆ ಬಿಜೆಪಿಯವರೇ ಇಟ್ಟ ಹೆಸರು ಬಜೆಟ್‌ ಜನತಾ ಪಾರ್ಟಿ: ಕಾಂಗ್ರೆಸ್‌

ಮೈಸೂರು : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯೊಳಗಿನ ಒಳ ಜಗಳ ಮತ್ತೊಂದು ಹಂತಕ್ಕೆ ತಿರುವು ಪಡೆದಿದ್ದು, ತಮ್ಮದೇ ಬಿಜೆಪಿ ಪಕ್ಷದ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರು ಸ್ವಪಕ್ಷದ ನಾಯಕ ಅಶೋಕ್‌ ಅವರ ವಿರುದ್ಧ ಸಮಧಾನ ಹೊರಹಾಕಿದ್ದಾರೆ.

ಅಶೋಕ್‌ ವಿರುದ್ಧ ಕಿಡಿಕಾರಿದ ಎಸ್‌.ಆರ್‌. ವಿಶ್ವನಾಥ್‌ ಅಶೋಕ್‌ ಬಕೆಟ್‌ ಹಿಡಿದುಕೊಂಡೇ ರಾಜಕಾರಣ ಮಾಡುತ್ತಾರೆ ಎಂದು ದೂರಿದ್ದರು. ಈ ಸಂಬಂಧ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಬಿಜೆಪಿಯವರಿಗೆ ಬಿಜೆಪಿಯವರೇ ಕೊಟ್ಟಿರುವ ಮತ್ತೊಂದು ಹೆಸರು ಬಕೆಟ್‌ ಜನತಾ ಪಾರ್ಟಿ ಎಂದು ಕಾಲೆಳೆದಿದ್ದಾರೆ.

ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌, ಅಶೋಕ್‌ ವಿರುದ್ಧ ನೀಡಿರುವ ಹೇಳಿಕೆನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪೋಸ್ಟ್‌ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ʼ ಆರ್‌. ಅಶೋಕ್‌ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್‌ ಹಿಡಿದಿರಿ? ಯಾವ ಬ್ರಾಂಡ್‌ ಬಕೆಟ್‌ ಹಿಡಿದಿರಿ? ಯಾರಿಗೆ ಬಕೆಟ್‌ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಮತ್ತೊಂದು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು, ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್‌ ಜನತಾ ಪಾರ್ಟಿ, ಬ್ಲೂ ಬಾಯ್ಸ್‌ ಜನತಾ ಪಾರ್ಟಿ, ಈಗ ಹೊಸದಾಗಿ ಬಕೆಟ್‌ ಜನತಾ ಪಾರ್ಟಿ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

https://x.com/INCKarnataka/status/1733376888138326455?s=20

https://x.com/INCKarnataka/status/1733364871226609998?s=20

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago