ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.
ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…