ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.
ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…