ರಾಜ್ಯ

ಹನಿಟ್ರ್ಯಾಪ್‌ ಹಿಂದಿರುವವರ ಹೆಸರ ಹೊರಬರಬೇಕು: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೆಎನ್‌ ರಾಜಣ್ಣ ಅವರ ಹನಿಟ್ರ್ಯಾಪ್‌ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ ತಾರ್ಕಿಕವಾಗಿ ಅಂತ್ಯವಾಗಿಲ್ಲ. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದರು.

ಸಹೋದರ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಹೀಗೆ ಆಯ್ತು. ತನಿಖೆ ಆಯಿತು, ಆದರೆ ಮಾಡಿದವರು ಯಾರು ಅಂತ ಆಚೆ ಬರಲಿಲ್ಲ ಎಂದು ತಿಳಿಸಿದರು.

ದೂರು ನೀಡಿದರೆ ಗೃಹ ಸಚಿವರು ತನಿಖೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಈ ರೀತಿಯ ಕೆಲಸ ಬೇಡ. ಬೇಕಾದರೆ ಹೋರಾಟ ಮಾಡಿ ಆದರೆ ಇಂತ ಹೀನ ಕೃತ್ಯ ಮಾಡಿಸಿ ಬಲಿಪಶು ಮಾಡಿಸಬೇಡಿ ಎಂದರು.

ಈ ಗಂಭಿರ ಸಮಸ್ಯೆಯಲ್ಲಿ ಸ್ವಪಕ್ಷೀಯದವರೇ ಇರಬಹುದು ಅಥವಾ ಬೇರೆ ಪಕ್ಷದವರೇ ಇರಬಹುದು. ಕಾಂಗ್ರೆಸ್‌ ಹೈಕಮಾಂಡ್‌ ಈ ವಿಚಾರಾವಾಗಿ ವರದಿ ತರಿಸಿಕೊಂಡು ತನಿಖೆ ನಡೆಸಲು ಸಮ್ಮತಿ ನೀಡಬೇಕು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago