ರಾಜ್ಯ

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ : ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್

ಬೆಳಗಾವಿ : ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್‌ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲ ಪತ್ರಿಕೆಗಳು ತೇನ್‌ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದೂ ಕೂಡಾ ಹಾಗೇ ಆಗಿದೆ ಎಂದರು.

ಇದನ್ನು ಓದಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೆ ಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ ಎಂದರು.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಾಗ ಮಾಡುವ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷಕ್ಕೆ ಒಂದು ಲಿಮಿಟ್ ಇದ್ದೇ ಇರುತ್ತದೆ. ಯಾವುದೇ ಹುದ್ದೆ ಇದ್ದರೂ ಬದಲಾವಣೆ ಮಾಡುವ ಒಂದು ಕಾಲ ಬಂದೇ ಬರುತ್ತದೆ. ಇವತ್ತು ಬರಬಹುದು, ಒಂದು ವರ್ಷ ಬಿಟ್ಟು ಬರಬಹುದು. ಯಾವುದೇ ಸಂದರ್ಭದಲ್ಲಿ ಬರಬಹುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

7 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

34 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

1 hour ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

6 hours ago