ರಾಜ್ಯ

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ : ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್

ಬೆಳಗಾವಿ : ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು ಬಹಳ ತಪ್ಪು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟರು.

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಅಧಿಕಾರಕ್ಕೆ ಬರಲು ಬಹಳಷ್ಟು ಜನ ಪ್ರತ್ಯಕ್ಷ, ಪರೋಕ್ಷವಾಗಿ ದುಡಿದಿದ್ದಾರೆ. 1960ರಲ್ಲಿ ತೇನ್‌ಸಿಂಗ್ ಹಿಮಾಲಯ ಪರ್ವತ ಏರಿದಾಗ ಇಡೀ ಜಗತ್ತಿನ ಎಲ್ಲ ಪತ್ರಿಕೆಗಳು ತೇನ್‌ಸಿಂಗ್ ಹಿಮಾಲಯ ಏರಿದರು ಎಂದು ಬರೆದರು. ಅವರ ಜೊತೆಗೆ ಇನ್ನೂ 14 ಜನರಿದ್ದರು. ಅವರ ಹೆಸರು ಬರಲಿಲ್ಲ. ಇದೂ ಕೂಡಾ ಹಾಗೇ ಆಗಿದೆ ಎಂದರು.

ಇದನ್ನು ಓದಿ: ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಸಹಕಾರವಿದೆ. ಮೊದಲ ಬಾರಿ ಆರಿಸಿ ಬಂದವರೂ ಸೇರಿ ಬಹಳಷ್ಟು ಶಾಸಕರು ಸಂಕಷ್ಟದಲ್ಲಿದ್ದಾರೆ. ಪಕ್ಷ, ಶಾಸಕರು ಮತ್ತು ಕಾರ್ಯಕರ್ತರ ಶ್ರಮದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎನ್ನುವುದನ್ನು ಗಮನಿಸಬೇಕು. ಎಲ್ಲರಿಗೂ ಅಷ್ಟೇ ಪ್ರಾಮುಖ್ಯತೆ ಸಿಗಬೇಕು. ಎಲ್ಲರ ಸಹಕಾರವಿದೆ. ಅಧಿಕಾರಕ್ಕೆ ಬರಲು ಅವರದೇ ಸ್ವಂತ ಎಫರ್ಟ್ ಇದೆ. ಹಾಗಾಗಿ, ಸ್ವಾಭಾವಿಕವಾಗಿ ಎಲ್ಲರೂ ಕ್ಲೆ ಮ್ ಮಾಡುತ್ತಾರೆ. ಆದರೆ, ಅದರ ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ ಎಂದರು.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಾಗ ಮಾಡುವ ಹೇಳಿಕೆಗೆ ಪ್ರತಿಕ್ರಿಯಿಸಿ, ಪಕ್ಷಕ್ಕೆ ಒಂದು ಲಿಮಿಟ್ ಇದ್ದೇ ಇರುತ್ತದೆ. ಯಾವುದೇ ಹುದ್ದೆ ಇದ್ದರೂ ಬದಲಾವಣೆ ಮಾಡುವ ಒಂದು ಕಾಲ ಬಂದೇ ಬರುತ್ತದೆ. ಇವತ್ತು ಬರಬಹುದು, ಒಂದು ವರ್ಷ ಬಿಟ್ಟು ಬರಬಹುದು. ಯಾವುದೇ ಸಂದರ್ಭದಲ್ಲಿ ಬರಬಹುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

2 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

8 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

8 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

8 hours ago