ರಾಜ್ಯ

ನನಗೆ ಪಕ್ಷ ಮುಖ್ಯ, ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಚ್ಚರಿ ಮೂಡಿಸಿದ್ದಾರೆ.

ಈ ಕುರಿತು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಮುಜುಗರ ತರಲು ಅಥವಾ ದುರ್ಬಲಗೊಳಿಸಲು ನಾನು ಸಿದ್ಧನಿಲ್ಲ. ಪಕ್ಷ ಮತ್ತು ಕಾರ್ಯಕರ್ತರಿದ್ದರೆ ಮಾತ್ರ ನಾವು ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಏಳುವರೆ ವರ್ಷ ಪೂರ್ಣಗೊಳಿಸಿದ್ದಾರೆ. ಮುಂದಿನ ಬಜೆಟ್‌ ಅನ್ನು ಮಂಡಿಸುತ್ತೇನೆ ಎಂದಿದ್ದಾರೆ, ಬಹಳ ಸಂತೋಷ. ಅವರು ಕಾಂಗ್ರೆಸ್‌‍ಗೆ ದೊಡ್ಡ ಆಸ್ತಿ. ವಿರೋಧ ಪಕ್ಷದ ನಾಯಕರಾಗಿಯೂ ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲ ಸೇರಿ 2028ರ ವಿಧಾನಸಭೆ ಚುನಾವಣೆ, 2029ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.

ಇದನ್ನು ಓದಿ: ರಾಜಕೀಯ ಗೊಂದಲಗಳಿಗೆ ಹೈಕಮಾಂಡ್‌ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ

ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕಾರಣಕ್ಕೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಶಾಸಕರು ಗೆದ್ದಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಸಂದರ್ಭದಲ್ಲಿ ನಾನು ಮಹದೇವಪ್ಪ ಅವರ ಕ್ಷೇತ್ರಕ್ಕೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಎಂದಿದ್ದೇನೆ. ಮಂಡ್ಯದಲ್ಲೂ ಇದೇ ರೀತಿ ಕೇಳಿದ್ದೇನೆ. ಜನ ಸಾಮೂಹಿಕ ನಾಯಕತ್ವಕ್ಕೆ ಮತ ಕೊಟ್ಟಿದ್ದಾರೆ. ಇಲ್ಲಿ ನನ್ನಿಂದಲೇ ಆಯಿತು ಎನ್ನುತ್ತಿಲ್ಲ ಎಂದರು.

ನಾಯಕರಿಗಿಂತಲೂ ಕಾರ್ಯಕರ್ತರು ಪ್ರಾಣ ಕೊಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಾವುಟ ಕಟ್ಟಿ, ಬಡಿದಾಡಿಕೊಂಡು ಪಕ್ಷವನ್ನು ಗೆಲ್ಲಿಸಿದ್ದಾರೆ. ನಾವು ಈವರೆಗೂ ಅವರಿಗೆ ಯಾವ ಅಧಿಕಾರವನ್ನು ನೀಡಿಲ್ಲ. ಶಾಸಕರು ಕಾರ್ಯಕರ್ತರ ಶ್ರಮದ ಫಲಾನುಭವಿಗಳು. ಮೇಕೆದಾಟು ಪಾದಯಾತ್ರೆಗೆ ಯಾರು ಇಲ್ಲದಾಗ ಎಂದಾಗ ನಡೆದೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಮತ್ತು ನಾವು ನಿರ್ಧಾರ ಮಾಡಿದ್ದೆವು. ಕಾರ್ಯಕರ್ತರು ಊಟ, ನೀರು ಕೊಟ್ಟು ಬೆಂಬಲಿಸಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

6 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago