DK Shivakumar
ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಮುಜುಗರ ತರಲು ಅಥವಾ ದುರ್ಬಲಗೊಳಿಸಲು ನಾನು ಸಿದ್ಧನಿಲ್ಲ. ಪಕ್ಷ ಮತ್ತು ಕಾರ್ಯಕರ್ತರಿದ್ದರೆ ಮಾತ್ರ ನಾವು ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಏಳುವರೆ ವರ್ಷ ಪೂರ್ಣಗೊಳಿಸಿದ್ದಾರೆ. ಮುಂದಿನ ಬಜೆಟ್ ಅನ್ನು ಮಂಡಿಸುತ್ತೇನೆ ಎಂದಿದ್ದಾರೆ, ಬಹಳ ಸಂತೋಷ. ಅವರು ಕಾಂಗ್ರೆಸ್ಗೆ ದೊಡ್ಡ ಆಸ್ತಿ. ವಿರೋಧ ಪಕ್ಷದ ನಾಯಕರಾಗಿಯೂ ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲ ಸೇರಿ 2028ರ ವಿಧಾನಸಭೆ ಚುನಾವಣೆ, 2029ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.
ಇದನ್ನು ಓದಿ: ರಾಜಕೀಯ ಗೊಂದಲಗಳಿಗೆ ಹೈಕಮಾಂಡ್ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕಾರಣಕ್ಕೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಸಂದರ್ಭದಲ್ಲಿ ನಾನು ಮಹದೇವಪ್ಪ ಅವರ ಕ್ಷೇತ್ರಕ್ಕೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಎಂದಿದ್ದೇನೆ. ಮಂಡ್ಯದಲ್ಲೂ ಇದೇ ರೀತಿ ಕೇಳಿದ್ದೇನೆ. ಜನ ಸಾಮೂಹಿಕ ನಾಯಕತ್ವಕ್ಕೆ ಮತ ಕೊಟ್ಟಿದ್ದಾರೆ. ಇಲ್ಲಿ ನನ್ನಿಂದಲೇ ಆಯಿತು ಎನ್ನುತ್ತಿಲ್ಲ ಎಂದರು.
ನಾಯಕರಿಗಿಂತಲೂ ಕಾರ್ಯಕರ್ತರು ಪ್ರಾಣ ಕೊಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಾವುಟ ಕಟ್ಟಿ, ಬಡಿದಾಡಿಕೊಂಡು ಪಕ್ಷವನ್ನು ಗೆಲ್ಲಿಸಿದ್ದಾರೆ. ನಾವು ಈವರೆಗೂ ಅವರಿಗೆ ಯಾವ ಅಧಿಕಾರವನ್ನು ನೀಡಿಲ್ಲ. ಶಾಸಕರು ಕಾರ್ಯಕರ್ತರ ಶ್ರಮದ ಫಲಾನುಭವಿಗಳು. ಮೇಕೆದಾಟು ಪಾದಯಾತ್ರೆಗೆ ಯಾರು ಇಲ್ಲದಾಗ ಎಂದಾಗ ನಡೆದೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಮತ್ತು ನಾವು ನಿರ್ಧಾರ ಮಾಡಿದ್ದೆವು. ಕಾರ್ಯಕರ್ತರು ಊಟ, ನೀರು ಕೊಟ್ಟು ಬೆಂಬಲಿಸಿದ್ದಾರೆ ಎಂದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…