DK Shivakumar
ಕನಕಪುರ: ಮುಖ್ಯಮಂತ್ರಿ ಮಾಡಿ ಎಂದು ತಾವು ಯಾರನ್ನು ಕೇಳಿಲ್ಲ. ಐದಾರು ಮಂದಿ ಮಧ್ಯೆ ದೆಹಲಿಯಲ್ಲಿ ನಡೆದ ಮಾತುಕತೆಯ ಗುಟ್ಟನ್ನು ಬಿಟ್ಟುಕೊಡಲು ನಾನು ಸಿದ್ಧನಿಲ್ಲ. ನನಗೆ ಪಕ್ಷ ಮುಖ್ಯ. ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಮುಜುಗರ ತರಲು ಅಥವಾ ದುರ್ಬಲಗೊಳಿಸಲು ನಾನು ಸಿದ್ಧನಿಲ್ಲ. ಪಕ್ಷ ಮತ್ತು ಕಾರ್ಯಕರ್ತರಿದ್ದರೆ ಮಾತ್ರ ನಾವು ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಏಳುವರೆ ವರ್ಷ ಪೂರ್ಣಗೊಳಿಸಿದ್ದಾರೆ. ಮುಂದಿನ ಬಜೆಟ್ ಅನ್ನು ಮಂಡಿಸುತ್ತೇನೆ ಎಂದಿದ್ದಾರೆ, ಬಹಳ ಸಂತೋಷ. ಅವರು ಕಾಂಗ್ರೆಸ್ಗೆ ದೊಡ್ಡ ಆಸ್ತಿ. ವಿರೋಧ ಪಕ್ಷದ ನಾಯಕರಾಗಿಯೂ ದುಡಿದಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲ ಸೇರಿ 2028ರ ವಿಧಾನಸಭೆ ಚುನಾವಣೆ, 2029ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕೆಲಸ ಮಾಡುತ್ತೇವೆ ಎಂದರು.
ಇದನ್ನು ಓದಿ: ರಾಜಕೀಯ ಗೊಂದಲಗಳಿಗೆ ಹೈಕಮಾಂಡ್ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ
ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕಾರಣಕ್ಕೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಸಂದರ್ಭದಲ್ಲಿ ನಾನು ಮಹದೇವಪ್ಪ ಅವರ ಕ್ಷೇತ್ರಕ್ಕೂ ಹೋಗಿ ನನ್ನ ಮುಖ ನೋಡಿ ಮತ ಹಾಕಿ ಎಂದಿದ್ದೇನೆ. ಮಂಡ್ಯದಲ್ಲೂ ಇದೇ ರೀತಿ ಕೇಳಿದ್ದೇನೆ. ಜನ ಸಾಮೂಹಿಕ ನಾಯಕತ್ವಕ್ಕೆ ಮತ ಕೊಟ್ಟಿದ್ದಾರೆ. ಇಲ್ಲಿ ನನ್ನಿಂದಲೇ ಆಯಿತು ಎನ್ನುತ್ತಿಲ್ಲ ಎಂದರು.
ನಾಯಕರಿಗಿಂತಲೂ ಕಾರ್ಯಕರ್ತರು ಪ್ರಾಣ ಕೊಟ್ಟು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಾವುಟ ಕಟ್ಟಿ, ಬಡಿದಾಡಿಕೊಂಡು ಪಕ್ಷವನ್ನು ಗೆಲ್ಲಿಸಿದ್ದಾರೆ. ನಾವು ಈವರೆಗೂ ಅವರಿಗೆ ಯಾವ ಅಧಿಕಾರವನ್ನು ನೀಡಿಲ್ಲ. ಶಾಸಕರು ಕಾರ್ಯಕರ್ತರ ಶ್ರಮದ ಫಲಾನುಭವಿಗಳು. ಮೇಕೆದಾಟು ಪಾದಯಾತ್ರೆಗೆ ಯಾರು ಇಲ್ಲದಾಗ ಎಂದಾಗ ನಡೆದೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಮತ್ತು ನಾವು ನಿರ್ಧಾರ ಮಾಡಿದ್ದೆವು. ಕಾರ್ಯಕರ್ತರು ಊಟ, ನೀರು ಕೊಟ್ಟು ಬೆಂಬಲಿಸಿದ್ದಾರೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…