ರಾಜ್ಯ

ದೇಶದ ಜನರಿಗೆ ಮೋದಿ ಪ್ರಧಾನಿ ಆಗಬೇಕು ಎಂಬ ಬಯಕೆ ಇದೆ ಈ ಪಂಚರಾಜ್ಯ ಫಲಿತಂಶದ ಮೂಲಕ ಹೇಳಿದ್ದಾರೆ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್‌ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ.

ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ ನಮಗೆ ಬಂದಿರುವ ವಿಜಯ ಇಲ್ಲಿಗೆ ನಿಲ್ಲುವುದಿಲ್ಲ. ಮುಂದೆ ಲೋಕಸಭಾ ಚುನಾವಣೆ ಮೋದಿ ಪ್ರಧಾನಿ ಆಗುವ ಮೂಲಕ ಬಿಜೆಪಿ ಬಹುಮತ ಸಾಭಿಸುತ್ತದೆ ಎಂಬುದರಲಿ ಅನುಮಾನ ಇಲ್ಲ ಎಂದರು.

ದೇಶದ ಜನ ದೇಶದ ರಕ್ಷಣೆ ಗ್ಯಾರಂಟಿ ಬಯಸುತ್ತಿದ್ದಾರೆ ಹೊರತು, ಅಧಿಕಾರ ಕಬಳಿಸುವ ಆಮಿಶದ ಗ್ಯಾರೆಂಟಿ ಅಲ್ಲ ಎಂಬುದು ಫಲಿತಾಂಶದ ಮೂಲಕ ತಿಳಿದಿದೆ. ರಾಜ್ಯದಲ್ಲಿ ೬ ತಿಂಗಳ ಕಾಂಗ್ರೆಸ್‌ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಕಾರ್ಯ ವೈಕರಿ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದರು.

ಲೋಕಸಭಾ ಚುನಾವಣೆ ರಾಜ್ಯದ ೨೮ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈ ಭಲ ಪಡಿಸುತ್ತೇವೆ ಎಂದರು.

andolanait

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

45 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

1 hour ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

1 hour ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

2 hours ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

2 hours ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago