ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ.
ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ ನಮಗೆ ಬಂದಿರುವ ವಿಜಯ ಇಲ್ಲಿಗೆ ನಿಲ್ಲುವುದಿಲ್ಲ. ಮುಂದೆ ಲೋಕಸಭಾ ಚುನಾವಣೆ ಮೋದಿ ಪ್ರಧಾನಿ ಆಗುವ ಮೂಲಕ ಬಿಜೆಪಿ ಬಹುಮತ ಸಾಭಿಸುತ್ತದೆ ಎಂಬುದರಲಿ ಅನುಮಾನ ಇಲ್ಲ ಎಂದರು.
ದೇಶದ ಜನ ದೇಶದ ರಕ್ಷಣೆ ಗ್ಯಾರಂಟಿ ಬಯಸುತ್ತಿದ್ದಾರೆ ಹೊರತು, ಅಧಿಕಾರ ಕಬಳಿಸುವ ಆಮಿಶದ ಗ್ಯಾರೆಂಟಿ ಅಲ್ಲ ಎಂಬುದು ಫಲಿತಾಂಶದ ಮೂಲಕ ತಿಳಿದಿದೆ. ರಾಜ್ಯದಲ್ಲಿ ೬ ತಿಂಗಳ ಕಾಂಗ್ರೆಸ್ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಕಾರ್ಯ ವೈಕರಿ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆ ರಾಜ್ಯದ ೨೮ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈ ಭಲ ಪಡಿಸುತ್ತೇವೆ ಎಂದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…