ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನಾಡಿನ ಜನತೆ ಪೂರ್ಣವಿರಾಮ ಹಾಕಲಿದ್ದಾರೆ ಎಂದು ಜೆಡಿಎಸ್ ಹೇಳಿದೆ. ಜಲಸಂಪನ್ಮೂಲ ಇಲಾಖೆಯ 22,200 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಸ್ವತಃ ರಾಜ್ಯ ಬಿಜೆಪಿ ಸರ್ಕಾರದ ಶಾಸಕ ಹಾಗೂ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೆ, ಸರ್ಕಾರದ ಹಾಡು-ಪಾಡಿನ ಬಗ್ಗೆ ನಿಮ್ಮವರೆ ಪ್ರಮಾಣಪತ್ರ ಕೊಟ್ಟಿದ್ದಾರೆ, ನೋಡಿ ಎಂದು ವ್ಯಂಗ್ಯವಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಬೇಲಿಯೇ ಎದ್ದು ಹೊಲ ಮೇಯುವ ಹಾಗೆ ಸರ್ಕಾರವೇ ಮುಂದೆ ನಿಂತು ಇಂತಹ ಅಕ್ರಮಗಳನ್ನು ನಡೆಸುತ್ತಿರುವುದಕ್ಕೆ ನಿಮ್ಮ ಶಾಸಕರ ಹೇಳಿಕೆಗಿಂತ ಪ್ರಬಲ ಸಾಕ್ಷಿ ಬೇಕಾ? ಇಂತಹ ಅಯೋಗ್ಯರಿಗೆ ಅಧಿಕಾರ ಕೊಟ್ಟ ನಾಡಿನ ಜನತೆ ಈಗ ಬರುವ ಚುನಾವಣೆಗೆ ಕಾಯುತ್ತಿದ್ದಾರೆ ಎಂದಿದೆ.
ರಾಜ್ಯ ಸರ್ಕಾರವು ಭ್ರಷ್ಟಾಚಾರದ ಕೂಪದಲ್ಲಿ ಬಿದ್ದಿದೆ ಎಂದು ಸಕಾರಣವಾಗಿ ವಿರೋಧ ಪಕ್ಷಗಳು ಟೀಕಿಸುವುದು ಒಂದು ಕಡೆ ಇರಲಿ, ಸ್ವತಃ ನಿಮ್ಮವರೇ ಈ ಕುರಿತು ಬಾಯಿ ಬಿಡುತ್ತಿರುವುದು ಏನನ್ನು ಹೇಳುತ್ತಿದೆ? ತಮ್ಮ ಲೂಟಿಕೋರತನವು ಚೆನ್ನಾಗಿಯೇ ಪ್ರತಿಫಲಿತವಾಗಿದೆ ಅಲ್ಲವೆ? ಎಂದು ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದೆ.
ಲಜ್ಜೆಗೆಟ್ಟವರೆಂದು ತಮ್ಮವರೇ ಹೇಳಿದಂಗಾಗಿದೆ. ಇಲಾಖೆಯ ವಿವಿಧ ನಿಗಮಗಳ ಹಲವು ಕಾಮಗಾರಿಗಳಲ್ಲಿ ಇಷ್ಟು ದೊಡ್ಡ ಮೊತ್ತದ ಟೆಂಡರ್ ಅಕ್ರಮ ನಡೆದಿದ್ದು, ಟೆಂಡರ್ ಕೂಡಲೇ ರದ್ದುಪಡಿಸಬೇಕೆಂದು ಗೂಳಿಹಟ್ಟಿ ಶೇಖರ್ ಅವರು ಇಲಾಖೆಯ ಅಪರ ಕಾರ್ಯದರ್ಶಿಗೆ ದೂರು ನೀಡಿರುವ ಗಂಭೀರ ಸುದ್ದಿ ಈಗ ಬಹಿರಂಗವಾಗಿದೆ. ಮಾನಗೇಡಿತನದ ತುತ್ತ-ತುದಿ ಎಂದರೆ ಇದೇ ಇರಬೇಕು ಎಂದು ಮೂದಲಿಸಿದೆ.
ನಿಗದಿತ ಕಾಮಗಾರಿಗಳ ಟೆಂಡರ್ ನೀಡುವ ಮುನ್ನವೇ ಅಕ್ರಮ ಕೂಟ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಶಾಸಕರಿಗೆ ಯಾವ ಕಾರಣಕ್ಕೆ ಜ್ಞಾನೋದಯವಾಗಿರಬಹುದು? ಕಮಿಷನ್ ದೊರೆಯಲಿಲ್ಲ ಎಂಬ ಕಾರಣವೊ? ಅಥವಾ ಜನದ್ರೋಹದ ಬಗ್ಗೆ ತಾಳಲಾರದ ಒಡಲ ಆಕ್ರೋಶವೊ ಎಂದು ಪ್ರಶ್ನಿಸಿದೆ.
ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಪಾರದರ್ಶಕತೆ ಕಾಪಾಡಿಕೊಳ್ಳದೇ, ಕೆಲವೇ ದಿನಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಕಾಮಗಾರಿಗಳ ಟೆಂಡರ್ ಪೂರ್ಣಗೊಳಿಸಲಾಗಿದೆ. ಇದೇನು ಸರ್ಕಾರವೊ ಅಥವಾ ಕಾಳಸಂತೆ ವ್ಯಾಪಾರವೊ? ಇದು ನೀಚತನದ ಪರಮಾವ ಅಲ್ಲವೆ? ಕೇವಲ ಒಂದು ಇಲಾಖೆಯ ಕತೆಯೇ ಹೀಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ನಾಡಿನ ಜನತೆ ಪೂರ್ಣವಿರಾಮ ಹಾಕಲಿದ್ದಾರೆ : ಜೆಡಿಎಸ್
Previous Articleಫೆ.15 : ಅನ್ನಭಾಗ್ಯ ಹಮಾಲಿ ಕಾರ್ಮಿಕರಿಂದ ಬೆಂಗಳೂರು ಚಲೋ
Next Article ʼಉತ್ತರ ಕೊಡಿʼ : ಮೋದಿ ವಿರುದ್ಧ ಸಿದ್ದು ಸರಣಿ ಟ್ವೀಟ್