ರಾಜ್ಯ

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ.

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ ಸರಾಸರಿ ೧೫ ಡಿ.ಸೆ.ಗಿಂತ ಕಡಿಮೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮಾತ್ರ ಕನಿಷ್ಠ ತಾಪಮಾನ ೧೫ ಡಿ.ಸೆ.ಗಿಂತ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು ೩೦ ಡಿ.ಸೆ.ಗಿಂತ ಹೆಚ್ಚಿದೆ. ಬಿಸಿಲ ನಾಡೆಂದೇ ಬಿಂಬಿಸಲಾಗುವ ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿಯುತ್ತಿದ್ದು, ಮೈ ಕೊರೆಯುವ ಚಳಿ ಜನರನ್ನು ಬಾಧಿಸುತ್ತಿದೆ.

ಹಿಂಗಾರು ಮಳೆ ಕೈಕೊಟ್ಟು ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ ಮೇಲಿಂದ ಮೇಲೆ ಉಂಟಾದ ಚಂಡಮಾರುತಗಳ ಪ್ರಭಾವದಿಂದಲೂ ಆಗಾಗ್ಗೆ ಬೀಸಿದ ಶೀತ ಗಾಳಿ ಜನರನ್ನು ತತ್ತರಿಸುವಂತೆ ಮಾಡಿದೆ. ಮೈಕೊರೆಯುವ ಚಳಿಯ ಜೊತೆಗೆ ಆಗಾಗ್ಗೆ ಬೀಸುವ ಮೇಲ್ಮೈ ಶೀತ ಗಾಳಿಗೆ ಜನರು ಹೈರಾಣಾಗಿದ್ದಾರೆ.

ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಹೊದಿಕೆಗಳ ಮೊರೆ ಹೋಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಚಳಿಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ಮುನ್ನಚ್ಚರಿಕೆ ವಹಿಸಿ ರಾತ್ರಿ ಹಾಗೂ ಮುಂಜಾನೆ ಬೆಚ್ಚನೆಯ ಉಡುಪುಗಳನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ೧೦.೪ ಡಿ.ಸೆ, ಬೀದರ್ ೭.೮, ವಿಜಯಪುರ ೭, ಧಾರವಾಡ ೯, ಗದಗ ೧೦.೨, ಕಲಬುರ್ಗಿ ೧೩, ಹಾವೇರಿ ೧೧.೮, ಕೊಪ್ಪಳ ೧೧.೯, ರಾಯಚೂರು ೯.೬, ಆಗುಂಬೆ ೧೦.೬, ಬೆಂಗಳೂರು ೧೩.೩, ದೇವನಹಳ್ಳಿ ವಿಮಾನ ನಿಲ್ದಾಣ ೧೪.೭, ಚಿತ್ರದುರ್ಗ ೧೪, ದಾವಣಗೆರೆ ೧೦, ಹಾಸನ ೮, ಚಿಂತಾಮಣಿ ೮.೪, ಮೈಸೂರು ೧೫.೪, ಶಿವಮೊಗ್ಗ ೧೧.೪ ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

10 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

10 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

10 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

11 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

11 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

11 hours ago