ರಾಜ್ಯ

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ.

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ ಸರಾಸರಿ ೧೫ ಡಿ.ಸೆ.ಗಿಂತ ಕಡಿಮೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮಾತ್ರ ಕನಿಷ್ಠ ತಾಪಮಾನ ೧೫ ಡಿ.ಸೆ.ಗಿಂತ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು ೩೦ ಡಿ.ಸೆ.ಗಿಂತ ಹೆಚ್ಚಿದೆ. ಬಿಸಿಲ ನಾಡೆಂದೇ ಬಿಂಬಿಸಲಾಗುವ ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿಯುತ್ತಿದ್ದು, ಮೈ ಕೊರೆಯುವ ಚಳಿ ಜನರನ್ನು ಬಾಧಿಸುತ್ತಿದೆ.

ಹಿಂಗಾರು ಮಳೆ ಕೈಕೊಟ್ಟು ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ ಮೇಲಿಂದ ಮೇಲೆ ಉಂಟಾದ ಚಂಡಮಾರುತಗಳ ಪ್ರಭಾವದಿಂದಲೂ ಆಗಾಗ್ಗೆ ಬೀಸಿದ ಶೀತ ಗಾಳಿ ಜನರನ್ನು ತತ್ತರಿಸುವಂತೆ ಮಾಡಿದೆ. ಮೈಕೊರೆಯುವ ಚಳಿಯ ಜೊತೆಗೆ ಆಗಾಗ್ಗೆ ಬೀಸುವ ಮೇಲ್ಮೈ ಶೀತ ಗಾಳಿಗೆ ಜನರು ಹೈರಾಣಾಗಿದ್ದಾರೆ.

ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಹೊದಿಕೆಗಳ ಮೊರೆ ಹೋಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಚಳಿಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ಮುನ್ನಚ್ಚರಿಕೆ ವಹಿಸಿ ರಾತ್ರಿ ಹಾಗೂ ಮುಂಜಾನೆ ಬೆಚ್ಚನೆಯ ಉಡುಪುಗಳನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ೧೦.೪ ಡಿ.ಸೆ, ಬೀದರ್ ೭.೮, ವಿಜಯಪುರ ೭, ಧಾರವಾಡ ೯, ಗದಗ ೧೦.೨, ಕಲಬುರ್ಗಿ ೧೩, ಹಾವೇರಿ ೧೧.೮, ಕೊಪ್ಪಳ ೧೧.೯, ರಾಯಚೂರು ೯.೬, ಆಗುಂಬೆ ೧೦.೬, ಬೆಂಗಳೂರು ೧೩.೩, ದೇವನಹಳ್ಳಿ ವಿಮಾನ ನಿಲ್ದಾಣ ೧೪.೭, ಚಿತ್ರದುರ್ಗ ೧೪, ದಾವಣಗೆರೆ ೧೦, ಹಾಸನ ೮, ಚಿಂತಾಮಣಿ ೮.೪, ಮೈಸೂರು ೧೫.೪, ಶಿವಮೊಗ್ಗ ೧೧.೪ ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

35 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

42 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

46 mins ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

50 mins ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

54 mins ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago