ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ ಸರಾಸರಿ ೧೫ ಡಿ.ಸೆ.ಗಿಂತ ಕಡಿಮೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮಾತ್ರ ಕನಿಷ್ಠ ತಾಪಮಾನ ೧೫ ಡಿ.ಸೆ.ಗಿಂತ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು ೩೦ ಡಿ.ಸೆ.ಗಿಂತ ಹೆಚ್ಚಿದೆ. ಬಿಸಿಲ ನಾಡೆಂದೇ ಬಿಂಬಿಸಲಾಗುವ ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿಯುತ್ತಿದ್ದು, ಮೈ ಕೊರೆಯುವ ಚಳಿ ಜನರನ್ನು ಬಾಧಿಸುತ್ತಿದೆ.
ಹಿಂಗಾರು ಮಳೆ ಕೈಕೊಟ್ಟು ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ ಮೇಲಿಂದ ಮೇಲೆ ಉಂಟಾದ ಚಂಡಮಾರುತಗಳ ಪ್ರಭಾವದಿಂದಲೂ ಆಗಾಗ್ಗೆ ಬೀಸಿದ ಶೀತ ಗಾಳಿ ಜನರನ್ನು ತತ್ತರಿಸುವಂತೆ ಮಾಡಿದೆ. ಮೈಕೊರೆಯುವ ಚಳಿಯ ಜೊತೆಗೆ ಆಗಾಗ್ಗೆ ಬೀಸುವ ಮೇಲ್ಮೈ ಶೀತ ಗಾಳಿಗೆ ಜನರು ಹೈರಾಣಾಗಿದ್ದಾರೆ.
ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಹೊದಿಕೆಗಳ ಮೊರೆ ಹೋಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಚಳಿಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ಮುನ್ನಚ್ಚರಿಕೆ ವಹಿಸಿ ರಾತ್ರಿ ಹಾಗೂ ಮುಂಜಾನೆ ಬೆಚ್ಚನೆಯ ಉಡುಪುಗಳನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ೧೦.೪ ಡಿ.ಸೆ, ಬೀದರ್ ೭.೮, ವಿಜಯಪುರ ೭, ಧಾರವಾಡ ೯, ಗದಗ ೧೦.೨, ಕಲಬುರ್ಗಿ ೧೩, ಹಾವೇರಿ ೧೧.೮, ಕೊಪ್ಪಳ ೧೧.೯, ರಾಯಚೂರು ೯.೬, ಆಗುಂಬೆ ೧೦.೬, ಬೆಂಗಳೂರು ೧೩.೩, ದೇವನಹಳ್ಳಿ ವಿಮಾನ ನಿಲ್ದಾಣ ೧೪.೭, ಚಿತ್ರದುರ್ಗ ೧೪, ದಾವಣಗೆರೆ ೧೦, ಹಾಸನ ೮, ಚಿಂತಾಮಣಿ ೮.೪, ಮೈಸೂರು ೧೫.೪, ಶಿವಮೊಗ್ಗ ೧೧.೪ ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…