ರಾಜ್ಯ

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ.

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ ಸರಾಸರಿ ೧೫ ಡಿ.ಸೆ.ಗಿಂತ ಕಡಿಮೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಮಾತ್ರ ಕನಿಷ್ಠ ತಾಪಮಾನ ೧೫ ಡಿ.ಸೆ.ಗಿಂತ ಹೆಚ್ಚಾಗಿದ್ದು, ಗರಿಷ್ಠ ತಾಪಮಾನವು ೩೦ ಡಿ.ಸೆ.ಗಿಂತ ಹೆಚ್ಚಿದೆ. ಬಿಸಿಲ ನಾಡೆಂದೇ ಬಿಂಬಿಸಲಾಗುವ ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿಯುತ್ತಿದ್ದು, ಮೈ ಕೊರೆಯುವ ಚಳಿ ಜನರನ್ನು ಬಾಧಿಸುತ್ತಿದೆ.

ಹಿಂಗಾರು ಮಳೆ ಕೈಕೊಟ್ಟು ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ ಮೇಲಿಂದ ಮೇಲೆ ಉಂಟಾದ ಚಂಡಮಾರುತಗಳ ಪ್ರಭಾವದಿಂದಲೂ ಆಗಾಗ್ಗೆ ಬೀಸಿದ ಶೀತ ಗಾಳಿ ಜನರನ್ನು ತತ್ತರಿಸುವಂತೆ ಮಾಡಿದೆ. ಮೈಕೊರೆಯುವ ಚಳಿಯ ಜೊತೆಗೆ ಆಗಾಗ್ಗೆ ಬೀಸುವ ಮೇಲ್ಮೈ ಶೀತ ಗಾಳಿಗೆ ಜನರು ಹೈರಾಣಾಗಿದ್ದಾರೆ.

ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಹೊದಿಕೆಗಳ ಮೊರೆ ಹೋಗಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಚಳಿಯ ಪ್ರಮಾಣ ವಾಡಿಕೆಗಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ಮುನ್ನಚ್ಚರಿಕೆ ವಹಿಸಿ ರಾತ್ರಿ ಹಾಗೂ ಮುಂಜಾನೆ ಬೆಚ್ಚನೆಯ ಉಡುಪುಗಳನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ಸಲಹೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ೧೦.೪ ಡಿ.ಸೆ, ಬೀದರ್ ೭.೮, ವಿಜಯಪುರ ೭, ಧಾರವಾಡ ೯, ಗದಗ ೧೦.೨, ಕಲಬುರ್ಗಿ ೧೩, ಹಾವೇರಿ ೧೧.೮, ಕೊಪ್ಪಳ ೧೧.೯, ರಾಯಚೂರು ೯.೬, ಆಗುಂಬೆ ೧೦.೬, ಬೆಂಗಳೂರು ೧೩.೩, ದೇವನಹಳ್ಳಿ ವಿಮಾನ ನಿಲ್ದಾಣ ೧೪.೭, ಚಿತ್ರದುರ್ಗ ೧೪, ದಾವಣಗೆರೆ ೧೦, ಹಾಸನ ೮, ಚಿಂತಾಮಣಿ ೮.೪, ಮೈಸೂರು ೧೫.೪, ಶಿವಮೊಗ್ಗ ೧೧.೪ ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago