ರಾಜ್ಯ

ಯುವ ರೈತರಿಗೆ ಪಿಎಂಎಫ್ಎಂಇ ಯೋಜನೆ ಮಾದರಿ : ಸಚಿವ ಎನ್. ಚಲುವರಾಯಸ್ವಾಮಿ

ಚಿಕ್ಕಮಗಳೂರು : ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು

ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು..

ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ.

ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ್ರ 60% ಸಬ್ಸಿಡಿ ನೀಡುತ್ತಿರುವುದು ಎಂದು ಸಚಿವರು ತಿಳಿಸಿದರು.

ರೈತರು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರಾಟ ಮಾಡದೇ, ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ಮಾಡಿ, ವೈವಿಧ್ಯಮಯ ನಾವೀನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು..

ಇನ್ನೂ ಉದ್ಯಮಕ್ಕೆ ಅರ್ಜಿ ಸಲ್ಲಿಸುವವರಿಗೆ ಬ್ಯಾಂಕ್ ಸಿಬಿಇಲ್ (CBIL) ಹಾಗೂ ಯಾವುದೇ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಒತ್ತಡ ನೀಡದೇ ಸಾಲ ಸೌಲಭ್ಯ ನೀಡಬೇಕು. ಈ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ ಸಚಿವ ಚಲುವರಾಯಸ್ವಾಮಿಯವರು ಸೂಚನೆ ನೀಡಿದರು..

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಶೃಂಗೇರಿ ಶಾಸಕ ರಾಜೇಗೌಡ, ಕಡೂರು ಶಾಸಕ ಆನಂದ್, ವಿಧಾನಪರಿಷತ್ ಸದಸ್ಯ ಬೋಜೆಗೌಡ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

9 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

10 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago