ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಆ್ಯಂಡ್ ಗ್ಯಾಂಗ್‌ನಿಂದ ಸ್ಥಳ ಮಹಜರ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ 17 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಬೆಂಗಳೂರಿನ ಕಾಪಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಜೂ.12) ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ. ರೇಣುಕಾಸ್ವಾಮಿ ಮೃತದೇಹ ಬಿಸಾಡಿದ ಸ್ಥಳ, ಹಲ್ಲೆ ಮಾಡಿದ ಸ್ಥಳಗಳಿಗೆ ಕರೆದೊಯ್ದು ಆರೋಪಿಗಳನ್ನು ಮಹಜರು ಮಾಡಲಾಗುತ್ತಿದೆ.

ಇನ್ನೂ ಪೊಲೀಸರು ಸ್ಥಳದಲ್ಲಿ ಸಿಕ್ಕಂತಹ ಪರಿಕರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಕೃತ್ಯಕ್ಕೆ ಬಳಸಿದಿ ಆಯುಧಗಳನ್ನು ಕೂಡ ಪೋಲಿಸರು ವಶಪಡಿಸಿಕೊಂಡಿದ್ದಾರೆ.

ನಟ ದರ್ಶನ್‌ ಅಭಿಮಾನಿ ಚಿತ್ರದುರ್ಗದ  ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿ,  ಶವವನ್ನು ಕಾಲುವೆಗೆ ಬಿಸಾಡಲಾಗಿತ್ತು. ಈ ಬಗ್ಗೆ ಭಾನುವಾರ ದಾಖಲಾದ ಈ ಪ್ರಕರಣವು ನಟ ದರ್ಶನ್‌ ಅವರನ್ನೇ ಸುತ್ತುಕೊಂಡಿದೆ. ಈ ಪ್ರಕರಣದಲ್ಲಿ ದರ್ಶನ್‌ ಎ2ಆರೋಪಿಯಾಗಿದ್ದು, ಅವರ ಆಪ್ತೆ ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

29 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

1 hour ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

1 hour ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

1 hour ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago