ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 17 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಬೆಂಗಳೂರಿನ ಕಾಪಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಜೂ.12) ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ. ರೇಣುಕಾಸ್ವಾಮಿ ಮೃತದೇಹ ಬಿಸಾಡಿದ ಸ್ಥಳ, ಹಲ್ಲೆ ಮಾಡಿದ ಸ್ಥಳಗಳಿಗೆ ಕರೆದೊಯ್ದು ಆರೋಪಿಗಳನ್ನು ಮಹಜರು ಮಾಡಲಾಗುತ್ತಿದೆ.
ಇನ್ನೂ ಪೊಲೀಸರು ಸ್ಥಳದಲ್ಲಿ ಸಿಕ್ಕಂತಹ ಪರಿಕರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಕೃತ್ಯಕ್ಕೆ ಬಳಸಿದಿ ಆಯುಧಗಳನ್ನು ಕೂಡ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ನಟ ದರ್ಶನ್ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿ, ಶವವನ್ನು ಕಾಲುವೆಗೆ ಬಿಸಾಡಲಾಗಿತ್ತು. ಈ ಬಗ್ಗೆ ಭಾನುವಾರ ದಾಖಲಾದ ಈ ಪ್ರಕರಣವು ನಟ ದರ್ಶನ್ ಅವರನ್ನೇ ಸುತ್ತುಕೊಂಡಿದೆ. ಈ ಪ್ರಕರಣದಲ್ಲಿ ದರ್ಶನ್ ಎ2ಆರೋಪಿಯಾಗಿದ್ದು, ಅವರ ಆಪ್ತೆ ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ.
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…