ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 17 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಬೆಂಗಳೂರಿನ ಕಾಪಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಜೂ.12) ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ. ರೇಣುಕಾಸ್ವಾಮಿ ಮೃತದೇಹ ಬಿಸಾಡಿದ ಸ್ಥಳ, ಹಲ್ಲೆ ಮಾಡಿದ ಸ್ಥಳಗಳಿಗೆ ಕರೆದೊಯ್ದು ಆರೋಪಿಗಳನ್ನು ಮಹಜರು ಮಾಡಲಾಗುತ್ತಿದೆ.
ಇನ್ನೂ ಪೊಲೀಸರು ಸ್ಥಳದಲ್ಲಿ ಸಿಕ್ಕಂತಹ ಪರಿಕರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಕೃತ್ಯಕ್ಕೆ ಬಳಸಿದಿ ಆಯುಧಗಳನ್ನು ಕೂಡ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ನಟ ದರ್ಶನ್ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿ, ಶವವನ್ನು ಕಾಲುವೆಗೆ ಬಿಸಾಡಲಾಗಿತ್ತು. ಈ ಬಗ್ಗೆ ಭಾನುವಾರ ದಾಖಲಾದ ಈ ಪ್ರಕರಣವು ನಟ ದರ್ಶನ್ ಅವರನ್ನೇ ಸುತ್ತುಕೊಂಡಿದೆ. ಈ ಪ್ರಕರಣದಲ್ಲಿ ದರ್ಶನ್ ಎ2ಆರೋಪಿಯಾಗಿದ್ದು, ಅವರ ಆಪ್ತೆ ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…