ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಗೌಡ ಸೇರಿದಂತೆ 17 ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಬೆಂಗಳೂರಿನ ಕಾಪಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಜೂ.12) ಬಂಧಿತ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿದೆ. ರೇಣುಕಾಸ್ವಾಮಿ ಮೃತದೇಹ ಬಿಸಾಡಿದ ಸ್ಥಳ, ಹಲ್ಲೆ ಮಾಡಿದ ಸ್ಥಳಗಳಿಗೆ ಕರೆದೊಯ್ದು ಆರೋಪಿಗಳನ್ನು ಮಹಜರು ಮಾಡಲಾಗುತ್ತಿದೆ.
ಇನ್ನೂ ಪೊಲೀಸರು ಸ್ಥಳದಲ್ಲಿ ಸಿಕ್ಕಂತಹ ಪರಿಕರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಕೃತ್ಯಕ್ಕೆ ಬಳಸಿದಿ ಆಯುಧಗಳನ್ನು ಕೂಡ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ನಟ ದರ್ಶನ್ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿ, ಶವವನ್ನು ಕಾಲುವೆಗೆ ಬಿಸಾಡಲಾಗಿತ್ತು. ಈ ಬಗ್ಗೆ ಭಾನುವಾರ ದಾಖಲಾದ ಈ ಪ್ರಕರಣವು ನಟ ದರ್ಶನ್ ಅವರನ್ನೇ ಸುತ್ತುಕೊಂಡಿದೆ. ಈ ಪ್ರಕರಣದಲ್ಲಿ ದರ್ಶನ್ ಎ2ಆರೋಪಿಯಾಗಿದ್ದು, ಅವರ ಆಪ್ತೆ ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…