ರಾಜ್ಯ

ಬಿಜೆಪಿ ದುರಾಡಳಿತದ ಫಲವೇ ಇಂದಿನ ಬೆಂಗಳೂರು ರಸ್ತೆ ಗುಂಡಿಗಳು : ಬಿಜೆಪಿಗೆ ಡಿಸಿಎಂ ಡಿಕೆಶಿ ಟಾಂಗ್‌

ಬೆಂಗಳೂರು : ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.

ನಗರದಲ್ಲಿ ರಸ್ತೆಗುಂಡಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.

ಇದನ್ನೂ ಓದಿ :-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿಲ್ಲ. ಆದರೂ ನಾವು ಬೆಂಗಳೂರಿನ ಹಿತ ಕಾಪಾಡುತ್ತೇವೆ ಎಂದರು.

ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆ ಎಂದು ತಿಳಿಸಿದರು.
ಉದ್ಯಮಿಗಳ ಜೊತೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಮ ಸ್ನೇಹಿತರಾದ ಅವರುಗಳು ಕೂಡ ತಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಬಿಹಾರದ ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯ ನಿರ್ಣಯಗಳ ಕುರಿತು ಕೇಳಿದಾಗ, ಈ ವಿಚಾರವಾಗಿ ನಾನು ಇಂದು ಮಾತನಾಡುವುದಿಲ್ಲ. ನಾವು ಸಂವಿಧಾನಬದ್ಧವಾಗಿ ಸಿಕ್ಕಿರುವ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ಹಕ್ಕಿನ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago