ಬೆಂಗಳೂರು : ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.
ನಗರದಲ್ಲಿ ರಸ್ತೆಗುಂಡಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.
ಇದನ್ನೂ ಓದಿ :-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್ ಶೋ ; ಸಾಹಸಮಯ ಪ್ರದರ್ಶನ
ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿಲ್ಲ. ಆದರೂ ನಾವು ಬೆಂಗಳೂರಿನ ಹಿತ ಕಾಪಾಡುತ್ತೇವೆ ಎಂದರು.
ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆ ಎಂದು ತಿಳಿಸಿದರು.
ಉದ್ಯಮಿಗಳ ಜೊತೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಮ ಸ್ನೇಹಿತರಾದ ಅವರುಗಳು ಕೂಡ ತಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಬಿಹಾರದ ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯ ನಿರ್ಣಯಗಳ ಕುರಿತು ಕೇಳಿದಾಗ, ಈ ವಿಚಾರವಾಗಿ ನಾನು ಇಂದು ಮಾತನಾಡುವುದಿಲ್ಲ. ನಾವು ಸಂವಿಧಾನಬದ್ಧವಾಗಿ ಸಿಕ್ಕಿರುವ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ಹಕ್ಕಿನ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…