ರಾಜ್ಯ

ಕೊಟ್ಟ ಮಾತು ತಪ್ಪಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ತಪ್ಪಲ್ಲ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂಬ ವಿಪಕ್ಷಗಳ ಟೀಕೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿಲ್ಲ. ಆದರೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಆಶ್ವಾಸನೆ ನೀಡಿದರು.

ಇದಕ್ಕೂ ಮುನ್ನ ಆಹಾರ ಸಚಿವ ಮುನಿಯಪ್ಪ ಮಾತನಾಡಿ, ವಿಪಕ್ಷಗಳು ಟೀಕಿಸುವಂತೆ 4 ತಿಂಗಳ ಗ್ಯಾರಂಟಿ ಹಣ ಬಾಕಿ ಇಲ್ಲ. ಕೇವಲ ಎರಡು ತಿಂಗಳದು ಮಾತ್ರ ಬಾಕಿ ಇರುವುದು. ಎರಡು ತಿಂಗಳಿಗೊಮ್ಮೆ ಹಣ ಹಾಕುತ್ತಿದ್ದೆವು. ಇನ್ನು ಮುಂದೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

9 mins ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

26 mins ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

48 mins ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

55 mins ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

1 hour ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

2 hours ago