ಬೆಂಗಳೂರು: ನಾವು ಸಿಎಂ ಸಿದ್ದರಾಮಯ್ಯರ ಪರವಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಒತ್ತಡ ಬಂದಿರುವ ಕಾರಣ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ಕೊಟ್ಟಿದ್ದಾರೆ.
ಮುಡಾ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದೆವು. ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ಕೊಡಲ್ಲ ಎಂಬ ವಿಶ್ವಾಸ ಇತ್ತು. ಆದರೆ ಅದು ಸುಳ್ಳಾಗಿದೆ. ಈಗ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ಕೊಟ್ಟಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ಈಗ ರಾಜಭವನ ದುರುಪಯೋಗ ಆಗುತ್ತಿದೆ. ಇದನ್ನು ನಾವು ದ್ವೇಷದ ನಡೆ ಅಂತಾನೆ ಭಾವಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ನಮ್ಮ ಕಾನೂನು ತಂಡ ಮುಂದೆ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ನೋಡಬೇಕು. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಪ್ರಶ್ನೆ ಈಗ ಉದ್ಭವಿಸಲ್ಲ. ನಾವು ಸಿದ್ದರಾಮಯ್ಯ ಪರ ಇದ್ದೇವೆ. ಕೇಂದ್ರ ಸರ್ಕಾರ ಏನೇ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…