ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಜಯಬೇರಿ ಹಾರಿಸಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕಾರಣರಾಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಫಲಿತಾಂಶದಿಂದ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ಅಥವ ಬೇರೆ ಯಾವುದೇ ಪಕ್ಷದಲ್ಲಿ ದೇಶ ಆಳುವ ನಾಯಕತ್ವ ಇಲ್ಲ, ಕಾಂಗ್ರೆಸ್ನ ಬೂಟಾಟಿಕೆಗೆ ಕವಡೆಕಾಸಿನ ಕಿಮ್ಮತಿಲ್ಲ ಎಂಬುದು ಸ್ಪಷ್ಟವಾಗಿ ಜನ ತೋರಿಸಿದ್ದಾರೆ ಎಂದರು.
ಈ ಫಲಿತಾಂಶದ ಕಾರಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ೨೮ ಸ್ಥಾನ ಗೆಲುವುದರ ಮೂಲಕ ಮೋದಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಬಿ.ವೈ. ವಿಜಯೇಂದ್ರ ರಾಜ್ಯಾಧ್ಯರಾದ ಬಳಿಕ ಜನರಲ್ಲಿ ಮೂಡಿರುವ ನಂಬಿಕೆ, ವಿಶ್ವಾಸದ ಲಾಭ ಪಡೆದು ಪಕ್ಷ ಭಲ ಪಡಿಸುತ್ತೇವೆ ಎಂದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…