ರಾಜ್ಯ

ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು : ಗೃಹ ನಿರ್ಮಾಣ ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಉತ್ತಮ ಪರಿಹಾರ ಕಂಡುಕೊಳ್ಳಲು ಮಹಾಮಂಡಳ ಸದಾಸಿದ್ದ. ಇಂದು ಅಬಲ ವರ್ಗದವರ ಗೃಹ ನಿರ್ಮಾಣದ ಕನಸು ನನಸು ಮಾಡುವಲ್ಲಿ ಗೃಹ ನಿರ್ಮಾಣ ಸಹಕಾರ ಸಂಘಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯವೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಅಭಿಪ್ರಾಯಪಟ್ಟರು.

​ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ಮತ್ತು ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟಿçÃಯ ಸಹಕಾರ ವರ್ಷ ೨೦೨೫ರ ಪ್ರಯುಕ್ತ ಏರ್ಪಡಿಸಿದ್ದ ವಸತಿ ಸಹಕಾರ ಸಂಘಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

​ಮುಂದುವರೆದು ಮಾತನಾಡುತ್ತಾ ನಗರಾಭಿವೃದ್ಧಿ ಪ್ರಾಧಿಕಾರಗಳಿಗಿಂತ ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಹೆಚ್ಚಿನ ನಿವೇಶನ ಹಂಚಿಕೆ ಮಾಡಿವೆ. ಆದ್ದರಿಂದ ಗೃಹ ನಿರ್ಮಾಣ ಸಹಕಾರ ಸಂಘಗಳು ತರಬೇತಿಯ ಪ್ರಯೋಜನ ಪಡೆದು ಯಶಸ್ವಿಯಾಗಿ ಗೃಹ ನಿರ್ಮಾಣ ಕಾರ್ಯವನ್ನು ನಿರ್ವಹಿಸಿ ಎಂದರು.

ಇದನ್ನೂ ಓದಿ:-ಧರ್ಮಸ್ಥಳ | ಷಡ್ಯಂತ್ರ ಮಾಡಿದವರ ಬಣ್ಣ ಬಯಲಾಗುತ್ತಿದೆ ; ಸಂಸದ ಯದುವೀರ್‌

​ಸರ್ಕಾರದ ಗಮನಕ್ಕೆ ಮಹಾಮಂಡಳದ ಮೂಲಕ ಹಲವು ಬೇಡಿಕೆಗಳನ್ನು ತರಲಾಗಿದೆ. ಅವುಗಳಲ್ಲಿ ಸಹಕಾರ ವಿಷಯವನ್ನು ಅಧ್ಯಯನ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಜತೆಗೆ ಸಹಕಾರ ವಿಷಯಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಗೃಹ ನಿರ್ಮಾಣ ಸಹಕಾರ ವಲಯದ ಯಾವುದೇ ಬೇಡಿಕೆ ಹಾಗೂ ಸಮಸ್ಯೆಗಳಿದ್ದರು ಅದನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಸತಿ ಮಹಾಮಂಡಳದ ಉಪಾಧ್ಯಕ್ಷರಾದ ಜಿ.ಪಿ. ಪಾಟೀಲ್, ಖಜಾಂಚಿ ಬಿ.ಸಿ. ಶಿವಲಿಂಗೇಗೌಡ, ನಿರ್ದೇಶಕರಾದ ಸುಮಾ ಜನಾರ್ಧನ್, ವ್ಯವಸ್ಥಾಪಕ ನಿರ್ದೇಶಕರಾದ ವೈ.ಹೆಚ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾದ ಜಗದೀಶ್ ಎಂ. ಕವಟಗಿಮಠ, ನಿರ್ದೇಶಕರಾದ ಆರ್. ರಾಮರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್, ಕಾರ್ಯದರ್ಶಿ ಅಶ್ವತ್ಥನಾರಾಯಣ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಜೆ. ಮಂಜುನಾಥ್, ಜಂಟಿ ನಿಬಂಧಕರಾದ ಡಾ. ಜಿ. ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

3 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

19 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

1 day ago