ರಾಜ್ಯ

ಗೃಹ ನಿರ್ಮಾಣದ ಕನಸು ನನಸಾಗಿಸುವಲ್ಲಿ ಸಹಕಾರ ವಲಯದ ಪಾತ್ರ ಶ್ಲಾಘನೀಯ : ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು : ಗೃಹ ನಿರ್ಮಾಣ ಸಹಕಾರ ಸಂಘಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಉತ್ತಮ ಪರಿಹಾರ ಕಂಡುಕೊಳ್ಳಲು ಮಹಾಮಂಡಳ ಸದಾಸಿದ್ದ. ಇಂದು ಅಬಲ ವರ್ಗದವರ ಗೃಹ ನಿರ್ಮಾಣದ ಕನಸು ನನಸು ಮಾಡುವಲ್ಲಿ ಗೃಹ ನಿರ್ಮಾಣ ಸಹಕಾರ ಸಂಘಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯವೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ ಅವರು ಅಭಿಪ್ರಾಯಪಟ್ಟರು.

​ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ಮತ್ತು ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟಿçÃಯ ಸಹಕಾರ ವರ್ಷ ೨೦೨೫ರ ಪ್ರಯುಕ್ತ ಏರ್ಪಡಿಸಿದ್ದ ವಸತಿ ಸಹಕಾರ ಸಂಘಗಳ ರಾಜ್ಯಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

​ಮುಂದುವರೆದು ಮಾತನಾಡುತ್ತಾ ನಗರಾಭಿವೃದ್ಧಿ ಪ್ರಾಧಿಕಾರಗಳಿಗಿಂತ ಗೃಹ ನಿರ್ಮಾಣ ಸಹಕಾರ ಸಂಘಗಳು ಇಂದು ಹೆಚ್ಚಿನ ನಿವೇಶನ ಹಂಚಿಕೆ ಮಾಡಿವೆ. ಆದ್ದರಿಂದ ಗೃಹ ನಿರ್ಮಾಣ ಸಹಕಾರ ಸಂಘಗಳು ತರಬೇತಿಯ ಪ್ರಯೋಜನ ಪಡೆದು ಯಶಸ್ವಿಯಾಗಿ ಗೃಹ ನಿರ್ಮಾಣ ಕಾರ್ಯವನ್ನು ನಿರ್ವಹಿಸಿ ಎಂದರು.

ಇದನ್ನೂ ಓದಿ:-ಧರ್ಮಸ್ಥಳ | ಷಡ್ಯಂತ್ರ ಮಾಡಿದವರ ಬಣ್ಣ ಬಯಲಾಗುತ್ತಿದೆ ; ಸಂಸದ ಯದುವೀರ್‌

​ಸರ್ಕಾರದ ಗಮನಕ್ಕೆ ಮಹಾಮಂಡಳದ ಮೂಲಕ ಹಲವು ಬೇಡಿಕೆಗಳನ್ನು ತರಲಾಗಿದೆ. ಅವುಗಳಲ್ಲಿ ಸಹಕಾರ ವಿಷಯವನ್ನು ಅಧ್ಯಯನ ಮಾಡಿದವರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವುದು ಜತೆಗೆ ಸಹಕಾರ ವಿಷಯಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಗೃಹ ನಿರ್ಮಾಣ ಸಹಕಾರ ವಲಯದ ಯಾವುದೇ ಬೇಡಿಕೆ ಹಾಗೂ ಸಮಸ್ಯೆಗಳಿದ್ದರು ಅದನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಸತಿ ಮಹಾಮಂಡಳದ ಉಪಾಧ್ಯಕ್ಷರಾದ ಜಿ.ಪಿ. ಪಾಟೀಲ್, ಖಜಾಂಚಿ ಬಿ.ಸಿ. ಶಿವಲಿಂಗೇಗೌಡ, ನಿರ್ದೇಶಕರಾದ ಸುಮಾ ಜನಾರ್ಧನ್, ವ್ಯವಸ್ಥಾಪಕ ನಿರ್ದೇಶಕರಾದ ವೈ.ಹೆಚ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾದ ಜಗದೀಶ್ ಎಂ. ಕವಟಗಿಮಠ, ನಿರ್ದೇಶಕರಾದ ಆರ್. ರಾಮರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್. ನವೀನ್, ಕಾರ್ಯದರ್ಶಿ ಅಶ್ವತ್ಥನಾರಾಯಣ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಜೆ. ಮಂಜುನಾಥ್, ಜಂಟಿ ನಿಬಂಧಕರಾದ ಡಾ. ಜಿ. ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

2 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

3 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

4 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

5 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

6 hours ago