ಬೆಂಗಳೂರು: ರಾಜ್ಯ ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ 36 ಕಾಂಗ್ರೆಸ್ ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಿಸಿದ ಬೆನ್ನಲ್ಲೇ ಇದೀಗ 34 ಜನ ಕೈ ಕಾರ್ಯಕರ್ತರನು ಒಳಗೊಂಡ ಎರಡನೇ ಪಟ್ಟಿಯನ್ನು ಸಿದ್ದಪಡಿಸಿದ್ದು, ಒಂದೆರೆಡು ದಿನಗಳಲ್ಲಿ ಯಾವೆಲ್ಲಾ ಕೈ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂಬ ಬಗ್ಗೆ ಅಧಸೂಚನೆ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.
ಸೋಮವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಒಪ್ಪಿಗೆ ನೀಡಿರುವ 34 ಕಾರ್ಯಕರ್ತರಲ್ಲಿ ಯಾರಿಗೆ ಯಾವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇವರಲ್ಲದರ ನೆಡುವೆ, ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ ಸೋರಿಕೆಯಾಗಿದೆ.
ಈ ಪ್ರಕಾರ ಕಾಂತಾ ನಾಯಕ್, ವಿನೋದ್ ಎಸ್ ಅಸೂಟಿ, ಮುಂಡರಗಿ ನಾಗರಾಜ್, ಡಾ. ಅಂಶುಮಂಥ್, ಬಿ.ಎಚ್. ಹರೀಶ, , ಜೆ.ಎಸ್. ಆಂಜನೇಯುಲು, ಡಾ. ಬಿ. ಯೋಗೇಶ ಬಾಬು, ಡಾ.ಎಚ್ ಕೃಷ್ಣ, ಮರಿಗೌಡ, ದೇವೀಂದ್ರಪ್ಪ ಮರ್ತೂರು, ರಾಜಶೇಖರ್ ರಾಮಸ್ವಾಮಿ, ಕೆ.ಮರೀಗೌಡ, ಜಯಣ್ಣ, ಎಸ್ ಮನೋಹರ್, ಅಯ್ಯೂಬ್ ಖಾನ್, ಮಮತಾ ಗುಟ್ಟಿ, ಜಿ. ಪಲ್ಲವಿ, ಎಸ್.ಇ ಸುಧೀಂದ್ರ, ಡಾ. ನಾಗಲಕ್ಷ್ಮೀ ಚೌಧರಿ, ಎಚ್.ಎಸ್. ಸುಂದರೇಶ್, ಆರ್.ಎಂ ಮಂಜುನಾಥ್ ಗೌಡ, ಜಯಣ್ಣ, ಸಂಪತ್ ರಾಜ್, ಸವಿತಾ ರಘು, ಪದ್ಮಾವತಿ, ಶಾಕಿರ್ ಸನದಿ, ಸರೋವರ ಶ್ರೀನಿವಾಸ್, ಸೋಮಣ್ಣ ಬೇವಿರಮರದ್, ಬಿ. ಪುಷ್ಪ ಅಮರನಾಥ್, ಮಹಬೂಬ್ ಪಾಷ, ಕೀರ್ತಿ ಗಣೇಶ್, ಮಝರ್ ಖಾನ್, ಲಲಿತ್ ರಾಘವ್, ಜಿ.ಎಸ್ ಮಂಜುನಾಥ್ ಅವರಿಗೆ ಮಂಡಳಿ ಅಧ್ಯಕ್ಷರ ಸ್ಥಾನ ಖಚಿತ ಎಂದಯ ಹೇಳಲಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…