ರಾಜ್ಯ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದ ಎರಡನೇ ಫೈನಲ್‌ ಪಟ್ಟಿ ಸೋರಿಕೆ!: ಮೈಸೂರಿನ ಇಬ್ಬರಿಗೆ ಸ್ಥಾನ?

ಬೆಂಗಳೂರು: ರಾಜ್ಯ ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ 36 ಕಾಂಗ್ರೆಸ್‌ ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಿಸಿದ ಬೆನ್ನಲ್ಲೇ ಇದೀಗ 34 ಜನ ಕೈ ಕಾರ್ಯಕರ್ತರನು ಒಳಗೊಂಡ ಎರಡನೇ ಪಟ್ಟಿಯನ್ನು ಸಿದ್ದಪಡಿಸಿದ್ದು, ಒಂದೆರೆಡು ದಿನಗಳಲ್ಲಿ ಯಾವೆಲ್ಲಾ ಕೈ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂಬ ಬಗ್ಗೆ ಅಧಸೂಚನೆ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

ಸೋಮವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೈಕಮಾಂಡ್‌ ಒಪ್ಪಿಗೆ ನೀಡಿರುವ 34 ಕಾರ್ಯಕರ್ತರಲ್ಲಿ ಯಾರಿಗೆ ಯಾವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇವರಲ್ಲದರ ನೆಡುವೆ, ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ ಸೋರಿಕೆಯಾಗಿದೆ.

ಈ ಪ್ರಕಾರ ಕಾಂತಾ ನಾಯಕ್‌, ವಿನೋದ್‌ ಎಸ್‌ ಅಸೂಟಿ, ಮುಂಡರಗಿ ನಾಗರಾಜ್‌, ಡಾ. ಅಂಶುಮಂಥ್‌, ಬಿ.ಎಚ್‌. ಹರೀಶ, , ಜೆ.ಎಸ್‌. ಆಂಜನೇಯುಲು, ಡಾ. ಬಿ. ಯೋಗೇಶ ಬಾಬು, ಡಾ.ಎಚ್‌ ಕೃಷ್ಣ, ಮರಿಗೌಡ, ದೇವೀಂದ್ರಪ್ಪ ಮರ್ತೂರು, ರಾಜಶೇಖರ್‌ ರಾಮಸ್ವಾಮಿ, ಕೆ.ಮರೀಗೌಡ, ಜಯಣ್ಣ, ಎಸ್‌ ಮನೋಹರ್‌, ಅಯ್ಯೂಬ್‌ ಖಾನ್‌, ಮಮತಾ ಗುಟ್ಟಿ, ಜಿ. ಪಲ್ಲವಿ, ಎಸ್‌.ಇ ಸುಧೀಂದ್ರ, ಡಾ. ನಾಗಲಕ್ಷ್ಮೀ ಚೌಧರಿ, ಎಚ್‌.ಎಸ್‌. ಸುಂದರೇಶ್‌, ಆರ್‌.ಎಂ ಮಂಜುನಾಥ್‌ ಗೌಡ, ಜಯಣ್ಣ, ಸಂಪತ್‌ ರಾಜ್‌, ಸವಿತಾ ರಘು, ಪದ್ಮಾವತಿ, ಶಾಕಿರ್‌ ಸನದಿ, ಸರೋವರ ಶ್ರೀನಿವಾಸ್‌, ಸೋಮಣ್ಣ ಬೇವಿರಮರದ್‌, ಬಿ. ಪುಷ್ಪ ಅಮರನಾಥ್‌, ಮಹಬೂಬ್‌ ಪಾಷ, ಕೀರ್ತಿ ಗಣೇಶ್‌, ಮಝರ್‌ ಖಾನ್‌, ಲಲಿತ್‌ ರಾಘವ್‌, ಜಿ.ಎಸ್‌ ಮಂಜುನಾಥ್‌ ಅವರಿಗೆ ಮಂಡಳಿ ಅಧ್ಯಕ್ಷರ ಸ್ಥಾನ ಖಚಿತ ಎಂದಯ ಹೇಳಲಾಗುತ್ತಿದೆ.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

56 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

2 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

4 hours ago