Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಇಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಡಿತರ ಚೀಟಿದಾರರಿಗೆ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಇದು ಮುಂದಿನ ತಿಂಗಳಿನಿಂದ ಜಾರಿಯಾಗುವ ಸಾಧ್ಯತೆಯಿದ್ದು, ಆಹಾರದ ಕಿಟ್‌ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀಪುಡಿ, ಅಡುಗೆ ಎಣ್ಣೆ ಹಾಗೂ ಗೋಧಿ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!