ರಾಜ್ಯ

ರಾಜ್ಯ ಸರ್ಕಾರ ಗುತ್ತಿಗೆದಾರರಿಂದ ಲೂಟಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುತ್ತಿದೆ : ಬಿ.ವೈ ವಿಜಯೇಂದ್ರ

ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿದೆ. ಆದರೆ ಈವರೆಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿ ಕಾರಿದ್ದಾರೆ.

ಎಲ್ಲರೂ ಗ್ಯಾರಂಟಿ ಕಡೆಗೆ ತೋರಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ರೈತರು ಪರದಾಡುತ್ತಿದ್ದಾರೆ, ಬರಗಾಲ ಪರಸ್ಥಿತಿಯಿದೆ. ರಾಜ್ಯ ಸರ್ಕಾರ ಎಚ್ಚೆತ್ತು ಹೊರರಾಜ್ಯದಿಂದ ವಿದ್ಯುತ್ ಖರೀದಿ ಮಾಡಿ ರೈತರಿಗೆ ಸ್ಪಂದಿಸಬೇಕು. ಆದ್ರೆ ಇದು ರೈತರ ಬಗ್ಗೆ ಕಾಳಜಿಯಿಲ್ಲದ ಸರ್ಕಾರ, ಬರಗಾಲದಲ್ಲೂ ಅದೇ ರೀತಿ ಮುಂದುವರಿದಿರುವುದು ದುರದೃಷ್ಟ. ಬರಗಾಲದ ಸಂದರ್ಭದಲ್ಲೂ ಮಂತ್ರಿಗಳಿಗೆ ಹೊಸ ಕಾರು ಖರೀದಿ ಮಾಡುತ್ತಿದ್ದಾರೆ. ರಾಜ್ಯದ ಜನ ನರಳಾಡುತ್ತಿರುವಾಗ ಸರ್ಕಾರದ ಇಂತಹ ವರ್ತನೆ ಖಂಡನೀಯವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯಕರ್ತರ ಶಕ್ತಿಯ ಮೇಲೆ ನಿಂತಿರುವ ಪಕ್ಷ. ಯಾರೋ ಒಬ್ಬರು ಇಬ್ಬರು ನಾಯಕರು ಪಕ್ಷ ಬಿಟ್ಟು ಹೋದರೆ ಹಿನ್ನಡೆಯಾಗಲ್ಲ. ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಗೆಲ್ಲುವ‌ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಐಟಿ ದಾಳಿಯಾದಾಗ ನೂರಾರು ಕೋಟಿ ರೂಪಾಯಿ ಹಣ ಸೀಜ್ ಮಾಡಿದ್ದಾರೆ. ಸಿಎಂ‌, ಡಿಸಿಎಂ ದಾಳಿಯನ್ನ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ. ಇದು ಸಿಎಂ ಸ್ವಾಗತ ಮಾಡಬೇಕಾದ ವಿಚಾರ. ಒಂದು ಕಡೆ ಕೊಳ್ಳೆಹೊಡೆಯುತ್ತಿರುವಂತ ಸರ್ಕಾರ ಇದು ಅಂತ ಜನರೇ ಮಾತನಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

lokesh

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

5 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

23 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

53 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

1 hour ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago