ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದಿದೆ. ಆದರೆ ಈವರೆಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಿಡಿ ಕಾರಿದ್ದಾರೆ.
ಎಲ್ಲರೂ ಗ್ಯಾರಂಟಿ ಕಡೆಗೆ ತೋರಿಸುತ್ತಿದ್ದಾರೆ. ವಿದ್ಯುತ್ ಸಮಸ್ಯೆಯಿಂದ ರೈತರು ಪರದಾಡುತ್ತಿದ್ದಾರೆ, ಬರಗಾಲ ಪರಸ್ಥಿತಿಯಿದೆ. ರಾಜ್ಯ ಸರ್ಕಾರ ಎಚ್ಚೆತ್ತು ಹೊರರಾಜ್ಯದಿಂದ ವಿದ್ಯುತ್ ಖರೀದಿ ಮಾಡಿ ರೈತರಿಗೆ ಸ್ಪಂದಿಸಬೇಕು. ಆದ್ರೆ ಇದು ರೈತರ ಬಗ್ಗೆ ಕಾಳಜಿಯಿಲ್ಲದ ಸರ್ಕಾರ, ಬರಗಾಲದಲ್ಲೂ ಅದೇ ರೀತಿ ಮುಂದುವರಿದಿರುವುದು ದುರದೃಷ್ಟ. ಬರಗಾಲದ ಸಂದರ್ಭದಲ್ಲೂ ಮಂತ್ರಿಗಳಿಗೆ ಹೊಸ ಕಾರು ಖರೀದಿ ಮಾಡುತ್ತಿದ್ದಾರೆ. ರಾಜ್ಯದ ಜನ ನರಳಾಡುತ್ತಿರುವಾಗ ಸರ್ಕಾರದ ಇಂತಹ ವರ್ತನೆ ಖಂಡನೀಯವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಕಾರ್ಯಕರ್ತರ ಶಕ್ತಿಯ ಮೇಲೆ ನಿಂತಿರುವ ಪಕ್ಷ. ಯಾರೋ ಒಬ್ಬರು ಇಬ್ಬರು ನಾಯಕರು ಪಕ್ಷ ಬಿಟ್ಟು ಹೋದರೆ ಹಿನ್ನಡೆಯಾಗಲ್ಲ. ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಗೆಲ್ಲುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಐಟಿ ದಾಳಿಯಾದಾಗ ನೂರಾರು ಕೋಟಿ ರೂಪಾಯಿ ಹಣ ಸೀಜ್ ಮಾಡಿದ್ದಾರೆ. ಸಿಎಂ, ಡಿಸಿಎಂ ದಾಳಿಯನ್ನ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ. ಇದು ಸಿಎಂ ಸ್ವಾಗತ ಮಾಡಬೇಕಾದ ವಿಚಾರ. ಒಂದು ಕಡೆ ಕೊಳ್ಳೆಹೊಡೆಯುತ್ತಿರುವಂತ ಸರ್ಕಾರ ಇದು ಅಂತ ಜನರೇ ಮಾತನಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…