ರಾಜ್ಯ

ಜಿ ರಾಮ್ ಜಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ದಾರಿ ತಪ್ಪಿಸುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ 125 ದಿನಗಳಿಗೆ ಹೆಚ್ಚಿಸಲಾಗಿದೆ. ಈ 125 ದಿನಗಳನ್ನು ಗ್ರಾಮ ಪಂಚಾಯತಿಗಳೇ ನಿರ್ಧಾರ ಮಾಡಬಹುದು. ಆದರೆ, ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾರ್ಮಿಕರಲ್ಲಿ ಹುಟ್ಟಿಸುತ್ತಿದೆ ಎಂದು ಟೀಕಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಮತ್ತು ರೈತರಿಗೆ ಅನುಕೂಲಕ್ಕಾಗಿ ವರ್ಷದಲ್ಲಿ ಎರಡು ಬಾರಿ ಉದ್ಯೋಗ ಖಾತ್ರಿಯ ಕೆಲಸಗಳನ್ನು ಕೃಷಿಗೋಸ್ಕರ ನೀಡಲಾಗಿದೆ. ಇದನ್ನು ರಾಜ್ಯ ಸರ್ಕಾರ ಆಕ್ಷೇಪ ಮಾಡುವ ಮುಖಾಂತರ ರೈತ ವಿರೋಧಿ ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಇದು ಇಡೀ ದೇಶದ ರೈತರ ಬೇಡಿಕೆಗೆ ಅನುಗುಣವಾಗಿದೆ. ಅಲ್ಲದೇ ವರ್ಷದಲ್ಲಿ 125 ದಿನ ಬಿಟ್ಟರೆ ಬೇರೆ ದಿನದಲ್ಲಿ ಬೇರೆ ರಂಗದಲ್ಲಿ ಕೆಲಸ ಮಾಡುವುದು ಅನಿವಾರ್ಯವಿದೆ ಎಂದಿದ್ದಾರೆ.

ಜಿ ರಾಮ್ ಜಿ ಯೋಜನೆಯಲ್ಲಿ ಒಂದು ವಾರದಿಂದ ಹದಿನೈದು ದಿನಗಳ ಒಳಗೆ ಕಡ್ಡಾಯವಾಗಿ ಕಾರ್ಮಿಕರ ವೇತನ ಕೊಡುವ ಬಗ್ಗೆ ಸ್ಪಷ್ಟವಾಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಅನುದಾನ ಸಿಗದೇ ಇರುವ ವಿಚಾರವನ್ನು ಹೇಳಿ ಕಾರ್ಮಿಕರಿಗೆ ಈ ಯೋಜನೆಯಿಂದ ದೂರ ಮಾಡುತ್ತಿದೆ.

ನರೇಗಾ ಯೋಜನೆಯಲ್ಲಿ ಹಲವಾರು ಪ್ರಕರಣಗಳು ಭ್ರಷ್ಟಾಚಾರದಿಂದ ಕೂಡಿರುವುದು ಯೋಜನೆಯ ದುರ್ಬಳಕೆ ಆಗಿರುವುದು. ಸುಳ್ಳು ಕೂಲಿಕಾರರ ಹೆಸರು ಹೇಳಿ ವೇತನ ತೆಗೆದಿರುವ ಲೋಪ ಇದ್ದು, ಅದನ್ನು ಸರಿಪಡಿಸಲು ಬಯೊಮೆಟ್ರಿಕ್ ತಂತ್ರಜ್ಞಾನ ಬಳಸಿ ಸೋರಿಕೆ ತಡೆಗಟ್ಟಲು ಯೋಜನೆ ಮಾಡಿದರೆ ಇದರಿಂದ ವಂಚನೆ ಆಗುತ್ತದೆ ಎಂಬ ತಪ್ಪು ಮಾಹಿತಿಯನ್ನು ರಾಜ್ಯ ಸರ್ಕಾರ ಹೇಳುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.60:40 ಅನುಪಾತದಲ್ಲಿ ಹಂಚಿಕೊಳ್ಳುವ ನಿರ್ಧಾರದಿಂದ ಹೆಚ್ಚು ದಿನ ಹೆಚ್ಚು ಜನರಿಗೆ ಉದ್ಯೋಗ ಕೊಡಲು ಮತ್ತು ರಾಜ್ಯ ಸರ್ಕಾರಗಳು ದುಂದು ವೆಚ್ಚ , ಅನುಪಯುಕ್ತ ವೆಚ್ಚ, ಭ್ರಷ್ಟಾಚಾರ ಕಡಿಮೆ ಮಾಡಿ ರೈತ ಕೂಲಿಕಾರರಿಗೆ ಸಹಾಯ ಮಾಡುವ ಚಿಂತನೆ ಮಾಡಬೇಕಿದೆ. ಅದನ್ನು ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಎಲ್ಲ ಮೇಲಿನ ಅಂಶಗಳಿಂದ 125 ದಿವಸ ಉದ್ಯೋಗ ಕೊಡುವುದರಿಂದ ಗ್ರಾಮೀಣ ಪ್ರದೇಶದ ನಿರುದ್ಯೊ?ಗ ಸಮಸ್ಯೆಯನ್ನು ನಿವಾರಣೆ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಯಲ್ಲಿದ್ದ ಭ್ರಷ್ಟಾಚಾರ ಸಂಪೂರ್ಣ ನಿವಾರಣೆ ಆಗುತ್ತದೆ. ಹಾಗೂ ಬಡವರು, ಕಾರ್ಮಿಕರು, ದೀನ -ದಲಿತರಿಗೆ ನ್ಯಾಯ ಸಮತ ಕೆಲಸ ಮತ್ತು ಕೂಡಲೇ ವೇತನ ಸಿಗುವ ವ್ಯವಸ್ಥೆ ಆಗುತ್ತದೆ. ಪಂಚಾಯತಿಗಳು ಯೋಜನೆಯನ್ನು ರೂಪಿಸುವ, ಅನುಷ್ಠಾನ ಮಾಡುವ ಸರ್ವ ಸ್ವತಂತ್ರ ಹೊಂದುತ್ತವೆ. ರಾಜ್ಯ ಸರ್ಕಾರದ ಮಧ್ಯ ಪ್ರವೇಶದಿಂದ ಮುಕ್ತವಾಗುತ್ತವೆ ಎಂದು ಅವರು ತಿಳಿಸಿದ್ದಾರೆ.

ಗ್ರಾಮೀಣ ಅವಶ್ಯಕತೆಗೆ ತಕ್ಕಂತೆ ಆಸ್ತಿಗಳ ನಿರ್ಮಾಣ ಆಗುತ್ತದೆ. ಇದರಿಂದ ವಿಕಸಿತ ಭಾರತದ ಗುರಿಗೆ ಗ್ರಾಮೀಣ ಪ್ರದೇಶದ ಬದುಕು ಮತ್ತು ಸಾಧನೆ ಆಗುವ ಕಲ್ಪನೆಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago