ರಾಜ್ಯ

ರಾಜ್ಯ ಸರ್ಕಾರ ವೇಣುಗೋಪಾಲ್‌ ಕಿವಿ ಹಿಂಡಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಲೆಯಾಳಂ ಕಡ್ಡಾಯ ಮಾಡದಂತೆ ತಿಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕೇರಳ ಸಿಎಂಗೆ ಪತ್ರ ಬರೆದರೆ ಸಾಲದು. ರಾಜ್ಯ ಸರ್ಕಾರ ವೇಣುಗೋಪಾಲ್‌ಗೆ ಕಿವಿ ಹಿಂಡಬೇಕು. ಮಲೆಯಾಳಂ ಭಾಷೆ ಕಡ್ಡಾಯ ಮಾಡದಂತೆ ನೋಡಿಕೊಳ್ಳಿ ಎಂದು ಆಗ್ರಹಿಸಿದರು.

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸದನದಲ್ಲಿ ಚರ್ಚೆ ಮಾಡದೇ ಬಿಲ್‌ ಅಂಗೀಕಾರ ಮಾಡಿದ್ದರು. ಸರ್ಕಾರ ಹಿಂಬಾಗಿಲ ಮೂಲಕ ಮಸೂದೆ ಅಂಗೀಕಾರ ಮಾಡಿಕೊಂಡಿತ್ತು. ಯಾವುದೇ ಚರ್ಚೆಗೆ ಅವಕಾಶ ನೀಡಿರಲಿಲ್ಲ. ಈ ಮಸೂದೆ ಬಗ್ಗೆ ಸಾಕಷ್ಟು ಆಕ್ಷೇಪವಿದೆ. ಮಸೂದೆ ಮೂಲಕ ತುರ್ತು ಪರಿಸ್ಥಿತಿ ಹೇರಲು ಹೊರಟಿದ್ದಾರೆ. ರಾಜ್ಯದ ಪ್ರತಿಯೊಬ್ಬರು ಈ ಮಸೂದೆಯನ್ನು ವಿರೋಧ ಮಾಡುತ್ತಿದ್ದಾರೆ. ಈ ಕಾರಣಕ್ಕೆ ರಾಜ್ಯಪಾಲರು ತಡೆ ಹಿಡಿದಿರಬಹುದು ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

10 mins ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

17 mins ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

2 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

2 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

3 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

4 hours ago