ರಾಜ್ಯ

ದೀಪಾವಳಿ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌: ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌

ಹುಬ್ಬಳ್ಳಿ: ದೀಪಾವಳಿ ಹಬ್ಬದ ಒಳಗಾಗಿಯೇ ರಾಜ್ಯ ಸರ್ಕಾರ ಢಮಾರ್‌ ಎನ್ನಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಟೈಮ್‌ ಬಾಂಬ್‌ ಫಿಕ್ಸ್‌ ಆಗಿದೆ. ಎಲ್ಲರೂ ಸಂಕ್ರಾಂತಿ ಹಬ್ಬಕ್ಕೂ ಮುಂಚೆ ಸರ್ಕಾರ ಬಿದ್ದು ಹೋಗುತ್ತೆ ಎನ್ನುತ್ತಿದ್ದರು. ಆದ್ರೆ ದೀಪಾವಳಿ ಹಬ್ಬದ ಒಳಗಾಗಿಯೇ ಸರ್ಕಾರ ಪತನವಾಗಲಿದೆ ಎಂದರು.

ಇನ್ನು ಹೊಸ ಸಿಎಂ ಅಷ್ಟೆನಾ ಅಥವಾ ಹೊಸ ಸರ್ಕಾರ ಬರುತ್ತೋ ಎಂಬುದನ್ನು ಕಾಲವೇ ನಿರ್ಣಯ ಮಾಡುತ್ತದೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಇಳಿಯೋದು ಫಿಕ್ಸ್‌ ಆಗಿದೆ. ಈಗಾಗಲೇ ಸಿಎಂ ಕುರ್ಚಿಗೆ ಪೈಪೋಟಿ ಶುರುವಾಗಿದ್ದು, ಡಜನ್‌ಗೂ ಹೆಚ್ಚು ಜನ ಸಿಎಂ ಆಕಾಂಕ್ಷಿಗಳಾಗಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ರಾಜ್ಯ ಸರ್ಕಾರದಲ್ಲಿ ಹಲವು ಹಗರಣಗಳು ನಡೆದಿರೋದು ಸ್ಪಷ್ಟವಾಗಿದೆ. ಪ್ರತಿನಿತ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಹಗರಣಗಳೇ ಸುದ್ದಿಯಾಗುತ್ತಿವೆ. ಇದೊಂದು ಭ್ರಷ್ಟಾಚಾರ ತುಂಬಿದ ಸರ್ಕಾರವಾಗಿದ್ದು, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಭ್ರಷ್ಟಾಚಾರ ಮುಚ್ಚಿ ಹಾಕಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಸತ್ಯ ಯಾವತ್ತಾದರೂ ಹೊರಗೆ ಬರಲೇಬೇಕು. ಆದ್ದರಿಂದ ಭ್ರಷ್ಟರು ಬಹಳ ದಿನ ಅಧಿಕಾರದಲ್ಲಿ ಇರಬಾರದು ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago