Mysore
26
scattered clouds

Social Media

ಶನಿವಾರ, 23 ಮೇ 2026
Light
Dark

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: 6 ರಿಂದ 14 ವರ್ಷದ ಮಕ್ಕಳು 8 ವರ್ಷದ ಶಿಕ್ಷಣ ಪಡೆಯುವುದು ಕಡ್ಡಾಯ. ಹೀಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಈ ಬಗ್ಗೆ ಕರ್ನಾಟಕ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಗೆ ಭೇಟಿ ನೀಡಿ ಮೊಬೈಲ್‌ ಮೂಲಕ ಸಮೀಕ್ಷೆ ಮಾಡಲಾಗುತ್ತದೆ. ಆ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ರೋಜನೆ ರೂಪಿಸಿದ್ದು, ಎಲ್ಲಾ ಮಕ್ಕಳು ಶಿಕ್ಷಣ ಕಲಿಯಬೇಕು ಎಂಬ ಆಶಯದಂತೆ ಈ ನಿರ್ಧಾರ ಮಾಡಲಾಗಿದೆ.

ಈ ಬಗ್ಗೆ ಸೂಚನೆ ನೀಡಿರುವ ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮ ಪಂಚಾಯತ್‌ಗಳು ಮನೆ ಮನೆ ಸಮೀಕ್ಷೆ ನಡೆಸಬೇಕು. ಜುಲೈ.31ರೊಳಗೆ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗಣತಿದಾರರಿಗೆ ಗ್ರಾಮ ಪಂಚಾಯಿತಿಯಲ್ಲಿ ತರಬೇತಿ ನೀಡಬೇಕು. ತರಬೇತಿಯಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಈ ಮೂಲಕ ರಾಜ್ಯ ಸರ್ಕಾರ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತಂದು ಅವರಿಗೂ ಶಿಕ್ಷಣ ನೀಡುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

Tags:
error: Content is protected !!