ರಾಜ್ಯ

ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ‌ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು‌ ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ ತಯಾರಿಕೆ ಹಾಗೂ ರಕ್ಷಣಾ ಕ್ಷೇತ್ರದ ಸಂಶೋಧನೆಯಲ್ಲಿ ಶೇ 60 ರಷ್ಟು ಕೊಡುಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಪಟ್ಟರು.

ಕಲಬುರಗಿ ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಆರ್ ಎನ್ ಮೆಹ್ತಾ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಅವರು ಮಾತನಾಡಿದರು.

ತಂತ್ರಜ್ಞಾನದ ಶರವೇಗದ ಬೆಳವಣಿಗೆಗೆ ಅನುಗುಣವಾಗಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದನ್ನು ಗಮನದಲ್ಲಿಟ್ಟಿಕೊಂಡು ವಿದ್ಯಾರ್ಥಿಗಳು ಸಾಧನೆಯ ಹಾದಿಯೆಡೆಗೆ ದಿಟ್ಟ ಹೆಜ್ಜೆಗಳನ್ನಿಟ್ಟು ಸಾಗಬೇಕು ಎಂದು ಹೇಳಿದರು.

ಬಾಹ್ಯಾಕಾಶ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಕಷ್ಟು ಅವಕಾಶಗಳು ಇಂದು ತೆರೆದುಕೊಂಡಿವೆ. ವಿದ್ಯಾರ್ಥಿಗಳು ತಮಗಿರುವ ಅವಕಾಶಗಳನ್ನು ಬಳಸಿಕೊಂಡು ತಾವು ಆಯ್ಕೆ ಮಾಡಿಕೊಂಡ‌ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು‌ ಕರೆ ನೀಡಿದ ಸಚಿವರು ರಾಜ್ಯ ಪ್ರಪಂಚದಲ್ಲಿಯೇ ಮಾಹಿತಿ ತಂತ್ರಜ್ಞಾನದಲ್ಲಿ ಅಗಾಧವಾದ ಸಾಧನೆ ಮಾಡಿದೆ. ಈಗಿನ ತರುಣ ವಿದ್ಯಾರ್ಥಿ‌ಗಳು ಈ ಕ್ಷೇತ್ರಗಳನ್ನು ಕೂಡಾ ಆಯ್ಕೆ ಮಾಡಿಕೊಂಡು ಕಲಿಕೆ ಹಾಗೂ ಕಟ್ಟುನಿಟ್ಟಿನ ಅಭ್ಯಾಸ ಮಾಡಿದರೆ ಸಾಧನೆ ಮಾಡಬಹುದು. ನಿಮಗೆ ಸರ್ಕಾರ ಸದಾ ಬೆನ್ನಿಗಿರುತ್ತದೆ ಎಂದು ಅಭಯ ನೀಡಿದರು.

ಎಸ್ ಆರ್ ಎನ್ ಮೆಹ್ತಾ ಶಾಲೆಯ ಹನ್ನೊಂದು ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಕಳೆದ ಜುಲೈ ತಿಂಗಳಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ಸಂಘದ ಅಡಿಯಲ್ಲಿ ಅಮೇರಿಕಾದ ಫ್ಲಾರಿಡಾದಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿದಂತೆ ಜರುಗಿದ ಅಂತರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿ ಸುಸ್ಥಿರ ಬಾಹ್ಯಾಕಾಶ ವಸಾಹತು ಹಾಗೂ ಭವಿಷ್ಯತ್ತಿನಲ್ಲಿ ವೈಜ್ಞಾನಿಕ ನಿಖರತೆ ಕುರಿತು ತಾವೇ ಪ್ರಸ್ತುತ ಪಡಿಸಿದ ‘ ಇರಾ ‘ ಎನ್ನುವ ಯೋಜನೆಯನ್ನು ಪ್ರಸ್ತುತಪಡಿಸಿ ಪ್ರಥಮ ಬಹುಮಾನ ಪಡೆದ ಹಿನ್ನೆಲೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಅಭಿನಂದಿಸಿ ಅವರು ಮಾತನಾಡುತ್ತಿದ್ದರು. ಪ್ರಪಂಚದ 25 ದೇಶಗಳಿಂದ 4900 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಎಸ್ ಆರ್ ಎನ್ ಮೆಹ್ತಾ ಶಾಲೆಯ ವಿದ್ಯಾರ್ಥಿಗಳ ಸಾಧನೆಯನ್ನು ಮುಕ್ತಕಂಠದಿಂದ ಹೊಗಳಿದ ಸಚಿವರು, ಸಾಧನೆಗೆ ಅಸಾಧ್ಯವಾದದು ಯಾವುದು ಇಲ್ಲ. ನಿರಂತರ ಕಲಿಕೆ ನಿಮ್ಮ ಸಾಧನೆಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಸಚಿವರೊಂದಿಗೆ ಹಂಚಿಕೊಂಡರು.

ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಡಾ ಶರಣಪ್ಪ ಢಗೆ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ‌ ಕಮೀಷನರ್ ಅವಿನಾಶ್ ಶಿಂಧೆ, ಸಹಾಯಕ‌ ಆಯುಕ್ತೆ ಸಾಹಿತ್ಯ, ಡಿಡಿಪಿಐ ಸೂರ್ಯಕಾಂತ ಮದಾನೆ ಸೇರಿದಂತೆ ಎಸ್ ಆರ್ ಎನ್ ಮೆಹ್ತಾ ಶಾಲೆಯ ಆಡಳಿತ ವರ್ಗದವರು ಹಾಗೂ ಸಿಬ್ಬಂದಿ ಇದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago