ರಾಜ್ಯ

ನಿಖಿಲ್ ಧರಿಸಿದ ಹುಲಿ ಉಗುರು ಪೆಂಡೆಂಟ್ ಸಿಂಥೆಟಿಕ್ನದು: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

ನಂತರ ಎಚ್ ಡಿ ಕುಮಾರಸ್ವಾಮಿಯವರು ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ಸಹ ಸ್ಪಷ್ಟನೆ ನೀಡಿದರು. ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ನ್ನು ಪರಿಶೀಲನೆ ನಡೆಸಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಇವತ್ತು ಬೆಳಗ್ಗಿನಿಂದ ಚಿತ್ರ ನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ.

ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ʼನದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ಅವರು ತಿಳಿಸಿದರು.

ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಇಂಥ ಪೆಂಡೆಂಟ್‌ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಅವರು ಹೇಳಿದರು.

ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೂ ಗೊತ್ತಿದೆ. ಅಂಥ ವಸ್ತುಗಳನ್ನು ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂಥಾ ಕೆಲಸ ಮಾಡುವುದಿಲ್ಲ. ಹೀಗಾಗಿ ನಮಗೆ ಯಾವುದೇ ಗಾಬರಿ ಇಲ್ಲ, ಆತಂಕ ಇಲ್ಲ. ಅಧಿಕಾರಿಗಳು ಎಫ್.ಎಸ್.ಎಲ್ʼಗೆ ಕಳಿಸಿ ವಾಸ್ತವಾಂಶ ಪತ್ತೆ ಹಚ್ಚಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago