ರಾಜ್ಯ

ನಿಖಿಲ್ ಧರಿಸಿದ ಹುಲಿ ಉಗುರು ಪೆಂಡೆಂಟ್ ಸಿಂಥೆಟಿಕ್ನದು: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

ನಂತರ ಎಚ್ ಡಿ ಕುಮಾರಸ್ವಾಮಿಯವರು ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ಸಹ ಸ್ಪಷ್ಟನೆ ನೀಡಿದರು. ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ನ್ನು ಪರಿಶೀಲನೆ ನಡೆಸಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಇವತ್ತು ಬೆಳಗ್ಗಿನಿಂದ ಚಿತ್ರ ನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ.

ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ʼನದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ಅವರು ತಿಳಿಸಿದರು.

ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಇಂಥ ಪೆಂಡೆಂಟ್‌ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಅವರು ಹೇಳಿದರು.

ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೂ ಗೊತ್ತಿದೆ. ಅಂಥ ವಸ್ತುಗಳನ್ನು ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂಥಾ ಕೆಲಸ ಮಾಡುವುದಿಲ್ಲ. ಹೀಗಾಗಿ ನಮಗೆ ಯಾವುದೇ ಗಾಬರಿ ಇಲ್ಲ, ಆತಂಕ ಇಲ್ಲ. ಅಧಿಕಾರಿಗಳು ಎಫ್.ಎಸ್.ಎಲ್ʼಗೆ ಕಳಿಸಿ ವಾಸ್ತವಾಂಶ ಪತ್ತೆ ಹಚ್ಚಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

andolanait

Recent Posts

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

18 seconds ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

9 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

15 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

20 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

27 mins ago