ರಾಜ್ಯ

ನಿಖಿಲ್ ಧರಿಸಿದ ಹುಲಿ ಉಗುರು ಪೆಂಡೆಂಟ್ ಸಿಂಥೆಟಿಕ್ನದು: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

ನಂತರ ಎಚ್ ಡಿ ಕುಮಾರಸ್ವಾಮಿಯವರು ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ಸಹ ಸ್ಪಷ್ಟನೆ ನೀಡಿದರು. ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ನ್ನು ಪರಿಶೀಲನೆ ನಡೆಸಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಇವತ್ತು ಬೆಳಗ್ಗಿನಿಂದ ಚಿತ್ರ ನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ.

ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ʼನದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ಅವರು ತಿಳಿಸಿದರು.

ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಇಂಥ ಪೆಂಡೆಂಟ್‌ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಅವರು ಹೇಳಿದರು.

ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೂ ಗೊತ್ತಿದೆ. ಅಂಥ ವಸ್ತುಗಳನ್ನು ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂಥಾ ಕೆಲಸ ಮಾಡುವುದಿಲ್ಲ. ಹೀಗಾಗಿ ನಮಗೆ ಯಾವುದೇ ಗಾಬರಿ ಇಲ್ಲ, ಆತಂಕ ಇಲ್ಲ. ಅಧಿಕಾರಿಗಳು ಎಫ್.ಎಸ್.ಎಲ್ʼಗೆ ಕಳಿಸಿ ವಾಸ್ತವಾಂಶ ಪತ್ತೆ ಹಚ್ಚಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago