ರಾಜ್ಯ

ನಿಖಿಲ್ ಧರಿಸಿದ ಹುಲಿ ಉಗುರು ಪೆಂಡೆಂಟ್ ಸಿಂಥೆಟಿಕ್ನದು: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

ನಂತರ ಎಚ್ ಡಿ ಕುಮಾರಸ್ವಾಮಿಯವರು ಜೆ ಪಿ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ಸಹ ಸ್ಪಷ್ಟನೆ ನೀಡಿದರು. ಹುಲಿ ಉಗುರು ರೀತಿಯಲ್ಲಿರುವ ಪೆಂಟೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ನ್ನು ಪರಿಶೀಲನೆ ನಡೆಸಿದ ನಂತರ ಅವರು ಸ್ಪಷ್ಟನೆ ನೀಡಿದ್ದಾರೆ. ಇವತ್ತು ಬೆಳಗ್ಗಿನಿಂದ ಚಿತ್ರ ನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಈ ವಿಷಯದಲ್ಲಿ ಕೇಳಿ ಬಂದಿದೆ.

ನಿಖಿಲ್ ಮದುವೆ ಸಂದರ್ಭದಲ್ಲಿ ಕೊರಳಿಗೆ ಹಾಕಿದ್ದ ಪೆಂಡೆಂಟ್ ಅದು. ನಿಖಿಲ್ ಹೆಸರು ಬಂದ ಬಳಕ ಸ್ವತಃ ನಾನೇ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಬಂದು ಪರಿಶೀಲನೆ ಮಾಡಿಕೊಳ್ಳಿ, ನಿಮಗೆ ಮುಜುಗರ ಆಗಬಾರದು. ಈ ರಾಜ್ಯದಲ್ಲಿ ನ್ಯಾಯ ಎನ್ನುವುದು ಎಲ್ಲರಿಗೂ ಒಂದೇ ಎಂದು ತಿಳಿಸಿದ್ದೆ. ಅದರಂತೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದರು.

ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲು ಯಾವುದೇ ತೊಂದರೆ ಇಲ್ಲ. ನೀವು ಬಂದು ಪರಿಶೀಲನೆ ಮಾಡಿ ಅಂದೆ. ಅದರಂತೆ ಅಧಿಕಾರಿಗಳು ಬಂದು ಮಹಜರ್ ಮಾಡಿದ್ದಾರೆ. ನಾನೇ ಅಧಿಕಾರಿಗಳ ಜತೆಯಲ್ಲಿ ಚಿನ್ನದ ಅಂಗಡಿಗೆ ಅದನ್ನು ಕಳಿಸುತ್ತಿದ್ದೇನೆ. ಅದನ್ನು ಬಿಚ್ಚಿ ತೆಗೆದುಕೊಂಡು ಹೋಗಲಿಕ್ಕೆ ಸಹಕಾರ ಕೊಟ್ಟಿದ್ದೇನೆ. ನಮ್ಮ ಬಳಿ ಇರುವ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ʼನದು. ಸಾಕಷ್ಟು ಜನರ ಬಳಿ ಇಂಥ ಪೆಂಡೆಂಟ್ ಇರುತ್ತದೆ ಎಂದು ಅವರು ತಿಳಿಸಿದರು.

ನಾನು ಬಹಳಷ್ಟು ಸಿನಿಮಾಗಳಲ್ಲಿ ನೋಡಿದ್ದೀನಿ, ನಟರು ಇಂಥ ಪೆಂಡೆಂಟ್‌ ಧರಿಸಿರುತ್ತಾರೆ. ನಾನು ಕೂಡ ಸಿನಿಮಾ ನಿರ್ಮಾಪಕನೇ. ಅನೇಕರು ಸ್ಟೈಲ್ ಆಗಿದೆ ಎಂದು ಧರಿಸುತ್ತಾರೆ. ನಿಖಿಲ್ ಅವರ ಮದುವೆಯಲ್ಲಿ ಯಾರೋ ಉಡುಗೊರೆ ಕೊಟ್ಟರು ಅಂತ ಹಾಕಿದ್ದು ಬಿಟ್ಟರೆ ಅದು ಬೀರುವಿನಲ್ಲಿ ಬಿದ್ದಿತ್ತು ಎಂದು ಅವರು ಹೇಳಿದರು.

ವನ್ಯಜೀವಿ ಸಂಕ್ಷರಣಾ ಕಾಯ್ದೆ ಬಗ್ಗೆ ನಮಗೂ ಗೊತ್ತಿದೆ. ಅಂಥ ವಸ್ತುಗಳನ್ನು ಇಟ್ಟುಕೊಳ್ಳುವುದು ಕಾನೂನು ಬಾಹಿರ ಎನ್ನುವ ಅರಿವು ನಮಗಿದೆ. ನಾವು ಅಂಥಾ ಕೆಲಸ ಮಾಡುವುದಿಲ್ಲ. ಹೀಗಾಗಿ ನಮಗೆ ಯಾವುದೇ ಗಾಬರಿ ಇಲ್ಲ, ಆತಂಕ ಇಲ್ಲ. ಅಧಿಕಾರಿಗಳು ಎಫ್.ಎಸ್.ಎಲ್ʼಗೆ ಕಳಿಸಿ ವಾಸ್ತವಾಂಶ ಪತ್ತೆ ಹಚ್ಚಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago