ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಪಿರಿಯಾಪಟ್ಟಣ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮೊದಲು ಮಹಿಳೆಯರಿಗೆ ಎಷ್ಟು ಕಷ್ಟವಿತ್ತು. ಗಂಡಸರನ್ನು ಮಾತನಾಡಿಸುವಾಗ ಹೆಂಗಸರು ತಲೆ ಬಗ್ಗಿಸಿ ಮಾತನಾಡಬೇಕಿತ್ತು. ತಲೆಯ ಮೇಲೆ ಸೆರಗು ಮುಚ್ಚಿಕೊಳ್ಳಬೇಕಿತ್ತು. ಮೌನಕ್ಕೆ ಶರಣಾಗಬೇಕಿತ್ತು, ಸ್ವಾಭಿಮಾನ ಹತ್ತಿಕ್ಕಿಕೊಳ್ಳಬೇಕಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ. ಮಹಿಳೆಯನ್ನು ನಿರ್ಧಾರ ಮಾಡುವ ಶಕ್ತಿಯಾಗಿ ಗುರುತಿಸುವ ಕಾಲ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗೃಹಲಕ್ಷ್ಮೀ ಯೋಜನೆಯನ್ನು ಹಕ್ಕಿನಿಂದ ತೆಗೆದುಕೊಂಡು, ಶಕ್ತಿ ಯೋಜನೆಯಲ್ಲಿ ಬಹಳ ಸ್ವಾಭಿಮಾನದಿಂದ ಪ್ರಯಾಣ ಮಾಡುತ್ತಿದ್ದಾಳೆ. ಒಬ್ಬ ಮಹಿಳಾ ಮಂತ್ರಿಯಾಗಿ ಇದಕ್ಕಿಂತ ಸಂತೋಷ ಇನ್ನೊಂದಿಲ್ಲ. ನಾನು ರಾಣಿ ಚನ್ನಮ್ಮನ ವಂಶಸ್ಥೆ, 300 ವರ್ಷ ನಮ್ಮನ್ನು ಆಳಿದ ಬ್ರಿಟಿಷರ ವಿರುದ್ಧ ಟೊಂಕಕಟ್ಟಿ ಹೋರಾಡಿದ ಮಹಿಳೆ ನಮ್ಮ ಕಿತ್ತೂರು ರಾಣಿ ಚನ್ನಮ್ಮ. ದೊಡ್ಡ ದೊಡ್ಡ ಮಹಾರಾಜರು ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಸ್ವಾಭಿಮಾನಿ ಮಹಿಳೆ ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ಮಹಿಳೆ. ಇದರರ್ಥ ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಮಾನವನ ಕರ್ತವ್ಯ ಎಂದರು.
ನಮ್ಮ ಮಕ್ಕಳೇ ಮುಂದಿನ ಭವಿಷ್ಯ, ಸುಮ್ಮನಿರು ಎನ್ನುವುದನ್ನು ಬಿಟ್ಟು ಮಾತನಾಡು ಎಂದು ನಾವು ಮಗಳಿಗೆ ಹೇಳಿಕೊಡಬೇಕು. ಕೇವಲ ವಿದ್ಯಾಭ್ಯಾಸ ಕಲಿಸದೇ ಸ್ವಂತ ಕಾಲಮೇಲೆ ನಿಲ್ಲುವಂತೆ ನಿಮ್ಮ ಮಕ್ಕಳನ್ನು ರೂಪಿಸಿ, ಸ್ವಾಭಿಮಾನದ ಪಾಠವನ್ನು ಕಲಿಸಬೇಕು, ಬೇರೆಯವರಿಗೆ ಗೌರವ ಕೊಡುವುದರ ಜೊತೆಗೆ ನಿನಗೆ ನೀನು ಗೌರವ ಕೊಡುವುದನ್ನು ಕಲಿ ಎಂಬುದನ್ನು ಕಲಿಸಿ ಎಂದು ಹೇಳಿದರು.
ನಾವು ಆರ್ಥಿಕವಾಗಿ ಸಬಲೀಕರಣಗೊಂಡರೆ ಬೇರೆಯವರು ನಮಗೆ ಮರ್ಯಾದೆಯನ್ನು ಕೊಡುತ್ತಾರೆ. ಹೀಗಾಗಿ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಇದು ನಮಗೆ ಸ್ವಾಭಿಮಾನದ ಪ್ರಶ್ನೆ ಎಂದು ಹೇಳಿದರು.
ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…
ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…
ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…