ರಾಜ್ಯ

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಪಿರಿಯಾಪಟ್ಟಣ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ‌ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ‌ ಸಚಿವರು ಮಾತನಾಡಿದರು.

ಮೊದಲು ಮಹಿಳೆಯರಿಗೆ ಎಷ್ಟು ಕಷ್ಟವಿತ್ತು. ಗಂಡಸರನ್ನು ಮಾತನಾಡಿಸುವಾಗ ಹೆಂಗಸರು ತಲೆ ಬಗ್ಗಿಸಿ ಮಾತನಾಡಬೇಕಿತ್ತು. ತಲೆಯ ಮೇಲೆ ಸೆರಗು ಮುಚ್ಚಿಕೊಳ್ಳಬೇಕಿತ್ತು. ಮೌನಕ್ಕೆ ಶರಣಾಗಬೇಕಿತ್ತು, ಸ್ವಾಭಿಮಾನ ಹತ್ತಿಕ್ಕಿಕೊಳ್ಳಬೇಕಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ. ಮಹಿಳೆಯನ್ನು ನಿರ್ಧಾರ ಮಾಡುವ ಶಕ್ತಿಯಾಗಿ ಗುರುತಿಸುವ ಕಾಲ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮೀ ಯೋಜನೆಯನ್ನು ಹಕ್ಕಿನಿಂದ ತೆಗೆದುಕೊಂಡು, ಶಕ್ತಿ ಯೋಜನೆಯಲ್ಲಿ ಬಹಳ ಸ್ವಾಭಿಮಾನದಿಂದ ಪ್ರಯಾಣ ಮಾಡುತ್ತಿದ್ದಾಳೆ. ಒಬ್ಬ ಮಹಿಳಾ ಮಂತ್ರಿಯಾಗಿ ಇದಕ್ಕಿಂತ ಸಂತೋಷ ಇನ್ನೊಂದಿಲ್ಲ. ನಾನು ರಾಣಿ ಚನ್ನಮ್ಮನ ವಂಶಸ್ಥೆ, 300 ವರ್ಷ ನಮ್ಮನ್ನು ಆಳಿದ ಬ್ರಿಟಿಷರ ವಿರುದ್ಧ ಟೊಂಕಕಟ್ಟಿ ಹೋರಾಡಿದ ಮಹಿಳೆ ನಮ್ಮ ಕಿತ್ತೂರು ರಾಣಿ ಚನ್ನಮ್ಮ. ದೊಡ್ಡ ದೊಡ್ಡ ಮಹಾರಾಜರು ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಸ್ವಾಭಿಮಾನಿ ಮಹಿಳೆ ಕಿತ್ತೂರು ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ ಧೀರ ಮಹಿಳೆ. ಇದರರ್ಥ ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಮಾನವನ ಕರ್ತವ್ಯ ಎಂದರು.

ನಮ್ಮ ಮಕ್ಕಳೇ ಮುಂದಿನ ಭವಿಷ್ಯ, ಸುಮ್ಮನಿರು ಎನ್ನುವುದನ್ನು ಬಿಟ್ಟು ಮಾತನಾಡು ಎಂದು ನಾವು ಮಗಳಿಗೆ ಹೇಳಿಕೊಡಬೇಕು. ಕೇವಲ ವಿದ್ಯಾಭ್ಯಾಸ ಕಲಿಸದೇ ಸ್ವಂತ ಕಾಲಮೇಲೆ ನಿಲ್ಲುವಂತೆ ನಿಮ್ಮ ಮಕ್ಕಳನ್ನು ರೂಪಿಸಿ, ಸ್ವಾಭಿಮಾನದ ಪಾಠವನ್ನು ಕಲಿಸಬೇಕು, ಬೇರೆಯವರಿಗೆ ಗೌರವ ಕೊಡುವುದರ ಜೊತೆಗೆ ನಿನಗೆ ನೀನು ಗೌರವ ಕೊಡುವುದನ್ನು ಕಲಿ ಎಂಬುದನ್ನು ಕಲಿಸಿ ಎಂದು ಹೇಳಿದರು.

ನಾವು ಆರ್ಥಿಕವಾಗಿ ಸಬಲೀಕರಣಗೊಂಡರೆ ಬೇರೆಯವರು ನಮಗೆ ಮರ್ಯಾದೆಯನ್ನು ಕೊಡುತ್ತಾರೆ. ಹೀಗಾಗಿ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಇದು ನಮಗೆ ಸ್ವಾಭಿಮಾನದ ಪ್ರಶ್ನೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago