Categories: ರಾಜ್ಯ

ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು: ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂದಿನ ಕಾಲದ ಯುಪಿಎ ಸರ್ಕಾರಕ್ಕೆ ವಕ್ಫ್‌ ಮಂಡಳಿ ಸ್ಥಾಪಿಸುವಂತೆ ಅಧಿಕಾರ ನಡೆಸುವಂತೆ ನ್ಯಾಯಾಂಗ ಅಧಿಕಾರ ನೀಡಿತ್ತು. ಅದನ್ನೇ ಇಂದು ರಾಜ್ಯ ಸರ್ಕಾರ ಬಳಸಿಕೊಂಡು ವಕ್ಫ್‌ ಮಂಡಳಿ ಹೆಸರಿನಲ್ಲಿ ರೈತರ ಜಮೀನು ನುಂಗುತ್ತಿದೆ. ಅಲ್ಲದೇ ಕೆಆರ್‌ಎಸ್‌ ಅಣೆಕಟ್ಟು ನಿರ್ಮಿಸಿದ ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ಸಹ ವಕ್ಫ್‌ ಮಂಡಳಿ ಕಬಳಿಸಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಮುಂದಿನ ದಿನಗಳಲ್ಲಿ ವಕ್ಫ್‌ ಮಂಡಳಿ ಹೆಸರಿನಲ್ಲಿ ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದೆಂದು ಹೇಳಿದರೆ ಆಶ್ವರ್ಯವಿಲ್ಲ. ಈ ಹಿಂದೆ ಬೌರಿಂಗ್‌ ಆಸ್ಪತ್ರೆಯ 2 ಎಕರೆ ಜಮೀನನ್ನು ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ಆದರೆ ನಾನು ಸಚಿವನಾಗಿದ್ದ ವೇಳೆ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಆ ಜಾಗವನ್ನು ಹೋರಾಟ ಮಾಡಿ ಆಸ್ತಿ ಉಳಿಸಬೇಕಾಯಿತು. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗಿ ರೈತರು ಕಂಗಾಲಾಗುವಂತೆ ಮಾಡುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರಿಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮೇಲೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯರೆಂದರೆ ಅಹಿಂದ ನಾಯಕ ಅಲ್ಲ. ಅವರೊಬ್ಬರು ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಸರ್ಕಾರ ಲ್ಯಾಂಡ್‌ ಜಿಹಾದ್‌ ನಂತರ ರೇಷನ್‌ ಕಾರ್ಡ್‌ ಜಿಹಾದ್‌ಅನ್ನು ಪ್ರಾರಂಭಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

24 mins ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago