Categories: ರಾಜ್ಯ

ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು: ವಿಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯ

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂದಿನ ಕಾಲದ ಯುಪಿಎ ಸರ್ಕಾರಕ್ಕೆ ವಕ್ಫ್‌ ಮಂಡಳಿ ಸ್ಥಾಪಿಸುವಂತೆ ಅಧಿಕಾರ ನಡೆಸುವಂತೆ ನ್ಯಾಯಾಂಗ ಅಧಿಕಾರ ನೀಡಿತ್ತು. ಅದನ್ನೇ ಇಂದು ರಾಜ್ಯ ಸರ್ಕಾರ ಬಳಸಿಕೊಂಡು ವಕ್ಫ್‌ ಮಂಡಳಿ ಹೆಸರಿನಲ್ಲಿ ರೈತರ ಜಮೀನು ನುಂಗುತ್ತಿದೆ. ಅಲ್ಲದೇ ಕೆಆರ್‌ಎಸ್‌ ಅಣೆಕಟ್ಟು ನಿರ್ಮಿಸಿದ ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ಸಹ ವಕ್ಫ್‌ ಮಂಡಳಿ ಕಬಳಿಸಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಮುಂದಿನ ದಿನಗಳಲ್ಲಿ ವಕ್ಫ್‌ ಮಂಡಳಿ ಹೆಸರಿನಲ್ಲಿ ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದೆಂದು ಹೇಳಿದರೆ ಆಶ್ವರ್ಯವಿಲ್ಲ. ಈ ಹಿಂದೆ ಬೌರಿಂಗ್‌ ಆಸ್ಪತ್ರೆಯ 2 ಎಕರೆ ಜಮೀನನ್ನು ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ಆದರೆ ನಾನು ಸಚಿವನಾಗಿದ್ದ ವೇಳೆ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಆ ಜಾಗವನ್ನು ಹೋರಾಟ ಮಾಡಿ ಆಸ್ತಿ ಉಳಿಸಬೇಕಾಯಿತು. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗಿ ರೈತರು ಕಂಗಾಲಾಗುವಂತೆ ಮಾಡುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರಿಗೆ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಮೇಲೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯರೆಂದರೆ ಅಹಿಂದ ನಾಯಕ ಅಲ್ಲ. ಅವರೊಬ್ಬರು ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಸರ್ಕಾರ ಲ್ಯಾಂಡ್‌ ಜಿಹಾದ್‌ ನಂತರ ರೇಷನ್‌ ಕಾರ್ಡ್‌ ಜಿಹಾದ್‌ಅನ್ನು ಪ್ರಾರಂಭಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

 

 

ಅರ್ಚನ ಎಸ್‌ ಎಸ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago