ರಾಜ್ಯ

ಯುವಪೀಳಿಗೆ ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕು : ಸಚಿವ ಎನ್.ಚಲುವರಾಯಸ್ವಾಮಿ ಸಲಹೆ

ನಾಗಮಂಗಲ : ಬುದ್ಧಿ ಮತ್ತು ಕೌಶಲ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಿಪುಲ ಅವಕಾಶಗಳಿವೆ. ಆದರೆ, ಎಲ್ಲರಿಗೂ ಉದ್ಯೋಗ ಸಿಗುವುದು ಕಷ್ಟ. ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡಬೇಕೆಂಬ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ಈ ಮೇಳ ನಡೆಸುತ್ತಿರುವ ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆಯ ಮುಖ್ಯಸ್ಥರು ನನಗೆ ಅತ್ಯಾಪ್ತರಾಗಿದ್ದು, ಮೇಳದಲ್ಲಿ ನೋಂದಾಯಿಸಿಕೊಂಡಿರುವ ಹೆಣ್ಣು ಮಕ್ಕಳಿಗೆ ಸೂಕ್ತ ತರಬೇತಿ ನೀಡಿ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗವನ್ನು ಕಲ್ಪಿಸಿಕೊಡುತ್ತಾರೆ. ತರಬೇತಿ ವೇಳೆ ಉಚಿತ ಊಟ, ವಸತಿ ಸೇರಿದಂತೆ ೧೫ ಸಾವಿರ ರೂ. ಗೌರವಧನ ನೀಡಲಿದ್ದಾರೆ. ಹೆಣ್ಣು ಮಕ್ಕಳು ಧೈರ್ಯವಾಗಿ ಮುಂದೆ ಬಂದು ಇಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೇಳದಲ್ಲಿ ಭಾಗವಹಿಸಿರುವ ಗಂಡು ಮಕ್ಕಳಿಗೂ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ರಾಜ್ಯದಲ್ಲಿರುವ ಹಲವು ಪ್ರತಿಷ್ಠಿತ ಕಂಪೆನಿಗಳಲ್ಲಿ ಅವಕಾಶ ಕಲ್ಪಿಸಿಕೊಡಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮುಗಿದ ನಂತರ ಉದ್ಯೋಗಿಯಾಗಬೇಕು ಅಥವಾ ಉದ್ಯಮಿಯಾಗಬೇಕು. ಕೃಷಿಯನ್ನೂ ಉದ್ಯಮ ಮಾಡಿಕೊಂಡರೆ ಪ್ರತಿ ತಿಂಗಳು ಕನಿಷ್ಠ ೫ ಸಾವಿರದಿಂದ ೨ ಲಕ್ಷ ರೂ. ವರೆಗೂ ಸಂಪಾದನೆ ಮಾಡಬಹುದು. ಆಗ ಉದ್ಯೋಗಕ್ಕಾಗಿ ಮತ್ತೊಬ್ಬರ ಮುಂದೆ ಕೈ ಕಟ್ಟಿ ನಿಲ್ಲುವ ಅಗತ್ಯ ಇರುವುದಿಲ್ಲ. ಸ್ವಯಂ ಉದ್ಯೋಗದಿಂದ ನಿಮ್ಮ ಗೌರವ ಹೆಚ್ಚಾಗಲಿದ್ದು ಸಮಾಜದಲ್ಲಿ ಒಳ್ಳೆಯ ಹೆಸರು ಗಳಿಸಬಹುದು ಎಂದು ಕಿವಿಮಾತು ಹೇಳಿದರು.

ಇದನ್ನು ಓದಿ: ಕನ್ನಡ ಭಾಷೆ ರಾಜ್ಯದ ಅಸ್ಮಿತೆ : ಸಿಎಂ

ರಾಜ್ಯದಲ್ಲಿ ೭ ಕೋಟಿಗೂ ಅಧಿಕ ಜನಸಂಖ್ಯೆ ಇದ್ದು ೭ ಲಕ್ಷ ಸರ್ಕಾರಿ ಹುದ್ದೆಗಳಷ್ಟೆ ಲಭ್ಯವಿದೆ. ವಿದ್ಯೆ ಕಲಿತವರೆಲ್ಲರೂ ಸರ್ಕಾರಿ ಕೆಲಸವೇ ಬೇಕೆಂಬ ಹಠವನ್ನು ಬಿಡಬೇಕು. ಇಂಜಿನಿಯರಿಂಗ್ ಪದವಿ ಪಡೆದಿರುವ ಅನೇಕ ಯುವಕರು ಗ್ರಾಮಲೆಕ್ಕಿಗರಾಗಿ ನೇಮಕಗೊಂಡು ಹಳ್ಳಿಗಳಲ್ಲಿ ಕೆಲಸ ಮಾಡುವ ಪರಿಸ್ಥಿತಿ ಬಂದಿದೆ. ಹಾಗಾಗಿ ತಮ್ಮ ವಿದ್ಯೆಗೆ ತಕ್ಕಂತೆ ಸ್ವ ಉದ್ಯೋಗ ಅಥವಾ ಉದ್ಯಮ ಕಂಡುಕೊಂಡರೆ ನೀವೇ ನೂರಾರು ಮಂದಿ ನಿರುದ್ಯೋಗಿಗಳಿಗೆ ಕೆಲಸ ಕೊಡಬಹುದು ಎಂದು ತಿಳಿಸಿದರು.

ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆ ಮುಖ್ಯಸ್ಥ ಕೆ.ಪಿ.ನಾಗೇಶ್ ಮಾತನಾಡಿ, ಸಚಿವರ ಕೋರಿಕೆಯಂತೆ ತಾಲ್ಲೂಕಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಪ್ರತಿಷ್ಠಿತ ಟಾಟಾ ಕಂಪೆನಿಗೆ ೧೮ ಸಾವಿರ ಉದ್ಯೋಗಿಗಳ ಅಗತ್ಯವಿದೆ. ಹಳ್ಳಿಗಳಲ್ಲಿ ಯುವ ಸಮುದಾಯಕ್ಕೆ ಕೆಲಸವಿಲ್ಲ. ಕಂಪೆನಿಗಳಲ್ಲಿ ಉದ್ಯೋಗಿಗಳಿಲ್ಲ. ಹಾಗಾಗಿ ಗ್ರಾಮೀಣ ಪ್ರದೇಶದ ಯುವ ಸಮುದಾಯ ಸಮಾನ್ಯ ಜ್ಞಾನ ಕೌಶಲ ಹೆಚ್ಚಿಸಿಕೊಳ್ಳಬೇಕು.

ಕಂಪೆನಿ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

3 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

43 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago