ರಾಜ್ಯ

ಯುವಪೀಳಿಗೆ ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕು : ಸಚಿವ ಎನ್.ಚಲುವರಾಯಸ್ವಾಮಿ ಸಲಹೆ

ನಾಗಮಂಗಲ : ಬುದ್ಧಿ ಮತ್ತು ಕೌಶಲ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ವಿಪುಲ ಅವಕಾಶಗಳಿವೆ. ಆದರೆ, ಎಲ್ಲರಿಗೂ ಉದ್ಯೋಗ ಸಿಗುವುದು ಕಷ್ಟ. ಉದ್ಯಮಿಗಳಾಗುವತ್ತ ಹೆಚ್ಚು ಗಮನ ಹರಿಸಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿ ಕೊಡಬೇಕೆಂಬ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ಈ ಮೇಳ ನಡೆಸುತ್ತಿರುವ ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆಯ ಮುಖ್ಯಸ್ಥರು ನನಗೆ ಅತ್ಯಾಪ್ತರಾಗಿದ್ದು, ಮೇಳದಲ್ಲಿ ನೋಂದಾಯಿಸಿಕೊಂಡಿರುವ ಹೆಣ್ಣು ಮಕ್ಕಳಿಗೆ ಸೂಕ್ತ ತರಬೇತಿ ನೀಡಿ ಪ್ರತಿಷ್ಠಿತ ಕಂಪೆನಿಗಳಲ್ಲಿ ಉದ್ಯೋಗವನ್ನು ಕಲ್ಪಿಸಿಕೊಡುತ್ತಾರೆ. ತರಬೇತಿ ವೇಳೆ ಉಚಿತ ಊಟ, ವಸತಿ ಸೇರಿದಂತೆ ೧೫ ಸಾವಿರ ರೂ. ಗೌರವಧನ ನೀಡಲಿದ್ದಾರೆ. ಹೆಣ್ಣು ಮಕ್ಕಳು ಧೈರ್ಯವಾಗಿ ಮುಂದೆ ಬಂದು ಇಂತಹ ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೇಳದಲ್ಲಿ ಭಾಗವಹಿಸಿರುವ ಗಂಡು ಮಕ್ಕಳಿಗೂ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ರಾಜ್ಯದಲ್ಲಿರುವ ಹಲವು ಪ್ರತಿಷ್ಠಿತ ಕಂಪೆನಿಗಳಲ್ಲಿ ಅವಕಾಶ ಕಲ್ಪಿಸಿಕೊಡಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮುಗಿದ ನಂತರ ಉದ್ಯೋಗಿಯಾಗಬೇಕು ಅಥವಾ ಉದ್ಯಮಿಯಾಗಬೇಕು. ಕೃಷಿಯನ್ನೂ ಉದ್ಯಮ ಮಾಡಿಕೊಂಡರೆ ಪ್ರತಿ ತಿಂಗಳು ಕನಿಷ್ಠ ೫ ಸಾವಿರದಿಂದ ೨ ಲಕ್ಷ ರೂ. ವರೆಗೂ ಸಂಪಾದನೆ ಮಾಡಬಹುದು. ಆಗ ಉದ್ಯೋಗಕ್ಕಾಗಿ ಮತ್ತೊಬ್ಬರ ಮುಂದೆ ಕೈ ಕಟ್ಟಿ ನಿಲ್ಲುವ ಅಗತ್ಯ ಇರುವುದಿಲ್ಲ. ಸ್ವಯಂ ಉದ್ಯೋಗದಿಂದ ನಿಮ್ಮ ಗೌರವ ಹೆಚ್ಚಾಗಲಿದ್ದು ಸಮಾಜದಲ್ಲಿ ಒಳ್ಳೆಯ ಹೆಸರು ಗಳಿಸಬಹುದು ಎಂದು ಕಿವಿಮಾತು ಹೇಳಿದರು.

ಇದನ್ನು ಓದಿ: ಕನ್ನಡ ಭಾಷೆ ರಾಜ್ಯದ ಅಸ್ಮಿತೆ : ಸಿಎಂ

ರಾಜ್ಯದಲ್ಲಿ ೭ ಕೋಟಿಗೂ ಅಧಿಕ ಜನಸಂಖ್ಯೆ ಇದ್ದು ೭ ಲಕ್ಷ ಸರ್ಕಾರಿ ಹುದ್ದೆಗಳಷ್ಟೆ ಲಭ್ಯವಿದೆ. ವಿದ್ಯೆ ಕಲಿತವರೆಲ್ಲರೂ ಸರ್ಕಾರಿ ಕೆಲಸವೇ ಬೇಕೆಂಬ ಹಠವನ್ನು ಬಿಡಬೇಕು. ಇಂಜಿನಿಯರಿಂಗ್ ಪದವಿ ಪಡೆದಿರುವ ಅನೇಕ ಯುವಕರು ಗ್ರಾಮಲೆಕ್ಕಿಗರಾಗಿ ನೇಮಕಗೊಂಡು ಹಳ್ಳಿಗಳಲ್ಲಿ ಕೆಲಸ ಮಾಡುವ ಪರಿಸ್ಥಿತಿ ಬಂದಿದೆ. ಹಾಗಾಗಿ ತಮ್ಮ ವಿದ್ಯೆಗೆ ತಕ್ಕಂತೆ ಸ್ವ ಉದ್ಯೋಗ ಅಥವಾ ಉದ್ಯಮ ಕಂಡುಕೊಂಡರೆ ನೀವೇ ನೂರಾರು ಮಂದಿ ನಿರುದ್ಯೋಗಿಗಳಿಗೆ ಕೆಲಸ ಕೊಡಬಹುದು ಎಂದು ತಿಳಿಸಿದರು.

ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆ ಮುಖ್ಯಸ್ಥ ಕೆ.ಪಿ.ನಾಗೇಶ್ ಮಾತನಾಡಿ, ಸಚಿವರ ಕೋರಿಕೆಯಂತೆ ತಾಲ್ಲೂಕಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಪ್ರತಿಷ್ಠಿತ ಟಾಟಾ ಕಂಪೆನಿಗೆ ೧೮ ಸಾವಿರ ಉದ್ಯೋಗಿಗಳ ಅಗತ್ಯವಿದೆ. ಹಳ್ಳಿಗಳಲ್ಲಿ ಯುವ ಸಮುದಾಯಕ್ಕೆ ಕೆಲಸವಿಲ್ಲ. ಕಂಪೆನಿಗಳಲ್ಲಿ ಉದ್ಯೋಗಿಗಳಿಲ್ಲ. ಹಾಗಾಗಿ ಗ್ರಾಮೀಣ ಪ್ರದೇಶದ ಯುವ ಸಮುದಾಯ ಸಮಾನ್ಯ ಜ್ಞಾನ ಕೌಶಲ ಹೆಚ್ಚಿಸಿಕೊಳ್ಳಬೇಕು.

ಕಂಪೆನಿ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಯುನಿಕ್ ಸ್ಕಿಲ್ ಸೋರ್ಸ್ ಸೆಲ್ಯೂಷನ್ ಸಂಸ್ಥೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

1 hour ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago