ರಾಜ್ಯ

ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

ಬೆಂಗಳೂರು : ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ (ಅ.13) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ಇದನ್ನೂ ಓದಿ:-ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ ; ಅ.27ರಂದು ಸುವರ್ಣ ಮಹೋತ್ಸವ

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ಕುಡುಕನ ಪಾತ್ರಗಳಿಗೆ ಜನಪ್ರಿಯತೆ
ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.

ಹಾಸ್ಯ ನಟನಾಗಿ ಯಶಸ್ಸು
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದು, ಉತ್ತರ ಕರ್ನಾಟಕದ ಕಲಾರಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಅವರ ಅಂತಿಮ ವಿಧಿವಿಧಾನಗಳು ತಾಳಿಕೋಟಿ ನಗರದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

1 hour ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

1 hour ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

3 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

4 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

4 hours ago