ರಾಜ್ಯ

ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ

ಬೆಂಗಳೂರು : ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಸೋಮವಾರ (ಅ.13) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ ಸಂಭವಿಸಿದ ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ಇದನ್ನೂ ಓದಿ:-ಮಾಲಿನ್ಯ ನಿಯಂತ್ರಣ ಮಂಡಳಿಗೆ 50ರ ಸಂಭ್ರಮ ; ಅ.27ರಂದು ಸುವರ್ಣ ಮಹೋತ್ಸವ

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ಕುಡುಕನ ಪಾತ್ರಗಳಿಗೆ ಜನಪ್ರಿಯತೆ
ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.

ಹಾಸ್ಯ ನಟನಾಗಿ ಯಶಸ್ಸು
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.

ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದು, ಉತ್ತರ ಕರ್ನಾಟಕದ ಕಲಾರಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಅವರ ಅಂತಿಮ ವಿಧಿವಿಧಾನಗಳು ತಾಳಿಕೋಟಿ ನಗರದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

2 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

2 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

2 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

2 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

13 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

13 hours ago